ಭರ್ಜರಿ ಆರಂಭ ಪಡೆದ ʼಗೃಹ ಜ್ಯೋತಿʼ; ಮೊದಲ ದಿನವೇ 55,000 ಗ್ರಾಹಕರ ನೋಂದಣಿ

Date:

Advertisements
  • ಕ್ರಾಂಗ್ರೆಸ್‌ನ ʼಗೃಹ ಜ್ಯೋತಿʼ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಜನಬೆಂಬಲ
  • ʼಗೃಹ ಜ್ಯೋತಿʼ ನೋಂದಣಿಗೆ ಸರತಿ ಸಾಲು,ರಜೆ ದಿನವೂ ತೆರೆದ ನಾಡ ಕಚೇರಿ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹ ಜ್ಯೋತಿʼ ಯೋಜನೆಗೆ ಭರಪೂರ ಜನ ಸ್ಪಂದನೆ ದೊರೆತಿದ್ದು, ಯೋಜನೆ ಜಾರಿಯ ಮೊದಲ ದಿನವೇ ಐವತ್ತೈದು ಸಾವಿರ ಗ್ರಾಹಕರ ನೋಂದಣಿ ಯಾಗಿದೆ. ಸರ್ಕಾರ ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿ, ಜನ ಯೋಜನೆ ಲಾಭ ಪಡೆದುಕೊಳ್ಳುವಂತೆ ತಿಳಿಸಿದೆ.

ರಾಜ್ಯದ ಗೃಹ ಬಳಕೆ ಗ್ರಾಹಕರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲು ಜಾರಿಯಾಗಿರುವ ‘ಗೃಹ ಜ್ಯೋತಿʼ ಯೋಜನೆಗೆ ಜೂನ್ 18ರ ಭಾನುವಾರ ಚಾಲನೆ ನೀಡಲಾಗಿದೆ.

ಅಂದು ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಯೋಜನೆಗೆ ಒಟ್ಟು 55,000 ಗ್ರಾಹಕರ ನೋಂದಣಿ ಕಾರ್ಯ ಪೂರ್ಣಗೊಂಡಿದೆ ಎಂದು ಸರ್ಕಾರ ತಿಳಿಸಿದೆ. ನೋಂದಣಿ ಪ್ರಕ್ರಿಯೆಯು ರಾಜ್ಯದ ಎಲ್ಲ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭಗೊಂಡಿತು.

Advertisements

ಯೋಜನೆಗೆ ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಮಾಡಲಾಯಿತು. ಗ್ರಾಹಕರು ವಿದ್ಯುತ್ ಬಿಲ್ ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು.

ಈ ಸುದ್ದಿ ಓದಿದ್ದೀರಾ? :ಬೆಲೆ ಏರಿಕೆಯಿಂದ ತತ್ತರಿಸಿದ ಜನರ ನೆರವಿಗಾಗಿ ಗ್ಯಾರಂಟಿಗಳನ್ನು ತರಬೇಕಾಯ್ತು: ದಿನೇಶ್ ಗುಂಡೂರಾವ್

ರಜಾ ದಿನವಾದ ಭಾನುವಾರವೂ ಎಲ್ಲ ಎಸ್ಕಾಂಗಳ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಯೋಜನೆ ನೋಂದಣಿಯ ಮೇಲುಸ್ತುವಾರಿವಹಿಸಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಂಡರು. ಯೋಜನೆ ನೋಂದಣಿಗೆ ಯಾವುದೇ ದಾಖಲೆಗಳನ್ನು ಗ್ರಾಹಕರು ಸಲ್ಲಿಸಬೇಕಾಗಿಲ್ಲ ಎಂದು ಇಂಧನ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಗ್ರಾಹಕರು ಮೊಬೈಲ್, ಲ್ಯಾಪ್ ಟಾಪ್ ಅಥವಾ ಸೈಬರ್ ಸೆಂಟರ್ ಗಳಿಗೆ ಹೋಗಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂರ್ಕಿಗಸಿ, ಇಲ್ಲವೆ 24×7 ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆಮಾಡಲು ಇಂಧನ ಇಲಾಖೆ ಸೂಚಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X