ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

Date:

Advertisements

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ತಂಡ ಗೆದ್ದು ಹಿನ್ನೆಲೆ ಯುವಕರ ಗುಂಪೊಂದು ಸಂಭ್ರಮಾಚರಣೆ ನಡೆಸಿದೆ. ಈ ವೇಳೆ, ಅತಿರೇಕದಿಂದ ಯುವಕರು ವರ್ತಿಸಿದ್ದು, ಅವರ ತಲೆ ಬೋಳಿಸಿ ಪೊಲೀಸರು ಕೂಡ ವಿಕೃತಿ ಮೆರೆದಿದ್ದಾರೆ.

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಸಯ್ಯಾಜಿ ಗೇಟ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಇದೀಗ, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

ಸಯ್ಯಾಜಿ ಗೇಟ್‌ ಬಳಿ ಯುವಕರು ಭಾನುವಾರ ರಾತ್ರಿ ಭಾರೀ ಪ್ರಮಾಣದಲ್ಲಿ ಪಟಾಕಿಗಳನ್ನು ಸಿಡಿಸಿದ್ದಾರೆ. ಅವರನ್ನು ತಡೆಯಲು ಬಂದ ಪೊಲೀಸರ ವಿರುದ್ಧವೂ ಯುವಕರು ದಾಂಧಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

Advertisements

ಯುವಕರನ್ನು ವಶಕ್ಕೆ ಪಡೆದ ಪೊಲೀಸರು ಅವರ ತಲೆಯನ್ನು ಬೋಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಸಯ್ಯಾಜಿ ಗೇಟ್ ಪೊಲೀಸ್‌ ಠಾಣಾಧಿಕಾರಿ ಅಜಯ್ ಸಿಂಗ್ ಗುಜ್ರಾರ್ ನೇತೃತ್ವದಲ್ಲಿ ಪೊಲೀಸರು ಯುವಕರನ್ನು ಅವಮಾನಕರವಾಗಿ ಶಿಕ್ಷಿಸಿದ್ದಾರೆ. ಯುವಕರ ಮೇಲೆ ಪೊಲೀಸರು ಹಿಂಸಾತ್ಮಕ ಮತ್ತು ವಿಕೃತವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ದೇವಾಸ್‌ನ ಎಸ್‌ಪಿ ಪುನೀತ್ ಗೆಹ್ಲೋಟ್, “ಭಾರತ ತಂಡದ ಗೆಲುವನ್ನು ಯುವಕರು ಸಂಭ್ರಮಿಸಿದ್ದರು. ಅವರು ಅಪರಾಧಿಗಳಲ್ಲ; ಅವರನ್ನು ಸಾರ್ವಜನಿಕವಾಗಿ ಮೆರವಣಿಗೆ ನಡೆಸಿರುವುದು ನ್ಯಾಯಸಮ್ಮತವೂ ಅಲ್ಲ. ಪೊಲೀಸರ ಧೋರಣೆಯನ್ನು ನಾವು ಕೂಡ ಖಂಡಿಸಿದ್ದೇವೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲಿದ್ದೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X