ದೆಹಲಿ | ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ

Date:

Advertisements
  • ದೆಹಲಿ ವಿಶ್ವವಿದ್ಯಾಲಯದ ಹೊರಗೆ ಘಟನೆ
  • ಕಾಲೇಜಿನಲ್ಲಿ ಬಿಎ ಅಧ್ಯಯನ ಮಾಡುತ್ತಿದ್ದ ನಿಖಿಲ್

ದೆಹಲಿ ವಿಶ್ವವಿದ್ಯಾಲಯದ ಆರ್ಯಭಟ ಕಾಲೇಜಿನ ಹೊರಗೆ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಭಾನುವಾರ (ಜೂನ್ 18) ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿದ್ಯಾರ್ಥಿಯನ್ನು ನಿಖಿಲ್‌ ಚೌಹಾಣ್‌ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಯು ವಿಶ್ವವಿದ್ಯಾಲಯದಲ್ಲಿ ಮುಕ್ತ ಅಧ್ಯಯನ ಕಾಲೇಜಿಗೆ ದಾಖಲಾಗಿದ್ದ.

ವಿದ್ಯಾರ್ಥಿ ನಿಖಿಲ್‌ ಭಾನುವಾರ ತರಗತಿಗೆ ಹಾಜರಾಗಲು ದೆಹಲಿ ವಿಶ್ವವಿದ್ಯಾಲಯದ ಕಾಲೇಜಿಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.

ದೆಹಲಿ ವಿಶ್ವವಿದ್ಯಾಲಯದ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಜತೆ ನಿಖಿಲ್ ಏಳು ದಿನಗಳ ಹಿಂದೆ ಕಲಹ ಮಾಡಿಕೊಂಡಿದ್ದ. ನಿಖಿಲ್‌ ವಿಶ್ವವಿದ್ಯಾಲಯಕ್ಕೆ ಆಗಮಿಸಿರುವುದನ್ನು ತಿಳಿದು ಅಲ್ಲಿಗೆ ಬಂದ ವಿದ್ಯಾರ್ಥಿಯು ನಿಖಿಲ್‌ ಜತೆ ಮತ್ತೆ ಜಗಳ ಪ್ರಾರಂಭಿಸಿ ನಿಖಿಲ್‌ಗೆ ಚಾಕುವಿನಿಂದ ಇರಿದಿದ್ದಾನೆ.

ವಿದ್ಯಾರ್ಥಿಯು ನಿಖಿಲ್‌ ಸ್ನೇಹಿತೆಯ ಜತೆ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಿಖಿಲ್‌ ಹಾಗೂ ವಿದ್ಯಾರ್ಥಿ ನಡುವೆ ಮಾತಿನ ಚಕಮಕಿ ನಡೆದಿತ್ತು.

ನಿಖಿಲ್‌ ಭಾನುವಾರ ವಿಶ್ವವಿದ್ಯಾಲಯಕ್ಕೆ ಆಗಮಿಸಿರುವುದನ್ನು ತಿಳಿದು ಆರೋಪಿತ ವಿದ್ಯಾರ್ಥಿಯು ತನ್ನ ಇತರ ಮೂವರು ಸಹಚರರ ಜೊತೆ ಕಾಲೇಜಿಗೆ ಆಗಮಿಸಿದನು. ಕಾಲೇಜಿನ ಗೇಟಿನ ಹೊರಗೆ ನಿಖಿಲ್‌ಗೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಪರಾರಿಯಾದನು.

ತಕ್ಷಣ ನಿಖಿಲ್‌ನನ್ನು ಮೋತಿ ಬಾಗ್‌ನಲ್ಲಿರುವ ಚರಕ್‌ ಪಾಲಿಕಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ನಿಖಿಲ್ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.

ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದ ಬಿಎ ಪದವಿಯ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ ನಿಖಿಲ್ ಪಶ್ಚಿಮ ವಿಹಾರದಲ್ಲಿ ವಾಸವಾಗಿದ್ದ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದ್ದು ಆರೋಪಿಯನ್ನು ಗುರುತಿಸಲಾಗಿದೆ. ಘಟನೆ ನಡೆದ ಕಾಲೇಜು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ದೆಹಲಿ ವಿಶ್ವವಿದ್ಯಾಲಯ ನಿಖಿಲ್‌ ಹತ್ಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

“ಅಮೂಲ್ಯ ಜೀವವೊಂದನ್ನು ಕಳೆದುಕೊಂಡಿರುವುದಕ್ಕೆ ನಮಗೆ ಬೇಸರವಾಗಿದೆ. ವಿದ್ಯಾರ್ಥಿ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ. ನಿಖಿಲ್‌ ಚೌಹಾಣ್‌ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ವಿಶ್ವವಿದ್ಯಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X