ಗುಬ್ಬಿ | ಹನಿಟ್ರ್ಯಾಪ್ ಗೆ ಸಿಲುಕಿ ಬ್ಲ್ಯಾಕ್ ಮೇಲ್ ಗೊಳಗಾದ ಪಪಂ ಮಾಜಿ ಅಧ್ಯಕ್ಷ : ಪ್ರಕರಣ ದಾಖಲು

Date:

Advertisements

ಹನಿಟ್ರ್ಯಾಪ್ ಗೆ ಸಿಲುಕಿ ಲಲನೆಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಬ್ಲ್ಯಾಕ್ ಮೇಲ್ ಗೆ ಒಳಗಾದ ಪಪಂ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಬೆದರಿಕೆಗೆ ಹೆದರಿ ಲಕ್ಷಾಂತರ ರೂಗಳ ದಂಡ ತೆತ್ತುವ ಮುನ್ನ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಳೆದ 45 ದಿನಗಳಿಂದ ನಡೆದ ಈ ಹೈಡ್ರಾಮಾ ಫೇಸ್ ಬುಕ್ ಮೂಲಕ ಲಲನೆಯೊಬ್ಬಳ ಸ್ನೇಹ ಬೆಳೆಸಿ ದಿನ ಕಳೆದಂತೆ ಹನಿ ಟ್ರ್ಯಾಪ್ ಗೆ ಸಿಲುಕಿದ ಪಟ್ಟಣ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಜಿ.ಎನ್.ಅಣ್ಣಪ್ಪಸ್ವಾಮಿ ಬರೋಬ್ಬರಿ 20 ಲಕ್ಷ ರೂಗಳ ಹಣದ ಬೇಡಿಕೆಗೆ ಹೆದರಿ ಗುಬ್ಬಿ ಪೊಲೀಸರ ಮೊರೆಹೋಗಿದ್ದಾರೆ.

ಫೇಸ್ ಬುಕ್ ನಲ್ಲಿ ಸ್ನೇಹ ಬೆಳೆದ ನಂತರ ಹಾಯ್, ಬಾಯ್, ಗುಡ್ ಮಾರ್ನಿಂಗ್, ಅಂತೆಲ್ಲ ಬೆಳೆದ ಸ್ನೇಹ ಸಲುಗೆ ಮಿತಿ ಮೀರಿ ವಿಡಿಯೋ ಕಾಲಿಂಗ್ ಮಾಡಿ ಮಾತನಾಡುವ ಘಟ್ಟ ತಲುಪಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಆ ಮಹಿಳೆ ಹಲವು ಕಡೆ ಬಲವಂತವಾಗಿ ಕರೆಸಿಕೊಂಡು ಮದುವೆಯಾಗುವಂತೆ ಒತ್ತಾಯಿಸುತ್ತಿದಳು ಎನ್ನಲಾಗಿದೆ.

Advertisements
1001160469

ತಿಪಟೂರು, ದೊಡ್ಡಬಳ್ಳಾಪುರ, ನೆಲಮಂಗಲ ಹೀಗೆ ನಾನಾ ಕಡೆ ಕರೆದು ಪ್ರೀತಿಸುತ್ತಿದ್ದೇನೆ ನನ್ನನ್ನು ಮದುವೆ ಮಾಡಿಕೊಳ್ಳಿ ಎಂದು ಒತ್ತಡ ಹಾಕಿ ಇದಕ್ಕೆ ಒಪ್ಪದಿದ್ದ ಕಾರಣ ಸ್ನೇಹಿತರೊಂದಿಗೆ ಸೇರಿ ಅವಳ ಜೊತೆಗಿನ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿ ಹಣದ ಬೇಡಿಕೆ ಇಟ್ಟಿದ್ದಾಳೆ ಎಂಬುದು ಮಾಜಿ ಅಧ್ಯಕ್ಷರ ಗಂಭೀರ ಆರೋಪವಾಗಿದೆ.

ದೂರು ಅರ್ಜಿ ಹೊರತಾಗಿ ಕೆಲ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಹಲವು ಬಿಸಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮುಖಂಡ ಅಣ್ಣಪ್ಪಸ್ವಾಮಿ ಬ್ಲ್ಯಾಕ್ ಮೇಲರ್ ಮಹಿಳೆಯ ಗೆಳೆತನ ನಂತರ ಭೇಟಿ, ದಿಢೀರ್ ಪ್ರೇಮ, ಆಮೇಲೆ ಅಲ್ಲಲ್ಲಿ ಮೀಟಿಂಗ್ ಮಾಡಿಕೊಂಡು ಒಂದು ಕಡೆ ಸೇರೋದು ಈಗೆಲ್ಲಾ ನಡೆಯುತ್ತಿದ್ದ ಸಲುಗೆ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ಜೊತೆ ಮತ್ತೊಬ್ಬ ಮಹಿಳೆಯ ಹೆಸರು ತಳುಕು ಹಾಕಿಕೊಂಡಿದೆ.

ಬೆಂಗಳೂರು ಕಡೆಗೆ ತೆರಳಲು ಹೇಳಿ ದೊಡ್ಡಬಳ್ಳಾಪುರ ಕಡೆ ಕರೆದುಕೊಂಡು ಹೋದ ಮಹಿಳೆ ದಾರಿಯುದ್ಧಕ್ಕೂ ಬೆದರಿಕೆ ಹಾಕಿ ಸಾಮಾಜಿಕ ಜಾಲ ತಾಣಗಳಲ್ಲಿ ಪೋಟೋ ವಿಡಿಯೋ ವೈರಲ್ ಮಾಡಿ ಮಾನ ಮರ್ಯಾದೆ ತೆಗೆಯುವ ಬೆದರಿಕೆಯಲ್ಲೇ ಹೊಟೇಲ್ ರೂಂ ನಲ್ಲಿ ಇಬ್ಬರು ಯುವಕರನ್ನು ಕರೆಸಿ ಬೆದರಿಕೆ ಹಾಕಿ ಕೊನೆಗೆ ಹಣಕ್ಕೆ ಬೇಡಿಕೆ ಇಡಲಾಗಿದೆ ಎಂದು ದೂರು ಉಲ್ಲೇಖ ಮಾಡಿದ್ದಾರೆ.

ದೂರು ಆಧರಿಸಿ ಗುಬ್ಬಿ ಪೊಲೀಸರು ಪ್ರಕರಣ ದಾಖಲಾಗಿಸಿ ಈ ಸಂಬಂಧ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಮಹಿಳೆಯರ ಜೊತೆ ಸೇರಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಗುಬ್ಬಿ ಪಟ್ಟಣದ ಯುವಕ ಭರತ್ ಮತ್ತು ಬಿಲ್ಲೇಪಾಳ್ಯ ಬಸವರಾಜು ಎಂಬುವರ ಸೆರೆಗೆ ತಂಡ ರಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X