ಮೈಸೂರು | ಸೌಜನ್ಯ ಹತ್ಯೆ ಪ್ರಕರಣ; ಮರು ತನಿಖೆಗೆ ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆ ಪ್ರತಿಭಟನೆ

Date:

Advertisements

ಕರುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರಿನ ಬಂಡಿಪಾಳ್ಯದಲ್ಲಿ ಮೊಂಬತ್ತಿ ಬೆಳಗಿಸುವುದರ ಮೂಲಕ ಪ್ರತಿಭಟನೆ ನಡೆಸಿ ಸೌಜನ್ಯ ಹತ್ಯೆ ಪ್ರಕರಣ ಮರು ತನಿಖೆ ನಡೆಸುವಂತೆ ಆಗ್ರಹಿಸಿದರು.

ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಹನ್ನೆರೆಡು ವರ್ಷಗಳ ಹಿಂದೆ ಸೌಜನ್ಯಳ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ ಬಂದಿಸಲಾಗಿದ್ದ ಸಂತೋಷ್ ರಾವ್ ಅವರನ್ನು ನಿರಪರಾಧಿ ಎಂದು ಪರಿಗಣಿಸಿ ನ್ಯಾಯಾಲಯವು ಬಿಡುಗಡೆ ಮಾಡಿದೆ. ಹಾಗಾದರೆ, ನಿಜವಾಗಿಯೂ ಸೌಜನ್ಯಳ ಮೇಲೆ ಬರ್ಬರವಾಗಿ ಅತ್ಯಾಚಾರ ನಡೆಸಿ, ಕ್ರೂರವಾಗಿ ಕೊಲೆ ಮಾಡಿರುವುದು ಯಾರು? ಈ ಕೂಡಲೇ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ಮರು ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಾಕ್ಷಿಗಳ ನಾಶ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸಾಕ್ಷಿ ನಾಶ ಆಗಿದೆ ಎಂದು ನ್ಯಾಯಾಲಯವೇ ಮೇಲ್ನೋಟಕ್ಕೆ ತಿಳಿಸಿರುವುದರಿಂದ, ಸಂಬಂಧಪಟ್ಟವರ ಮೇಲೆ ಕಾನೂನಿನ ಅಡಿಯಲ್ಲಿ ಸೂಕ್ತ ತನಿಖೆ ನಡೆಸಿ ಕಾರಣಗಳನ್ನ ಪಡೆದುಕೊಳ್ಳುವುದರ ಜೊತೆಗೆ, ಇಂದಿನ ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ತನಿಖೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಕರುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಕೆ ವೇಣುಗೋಪಾಲ್,ರಾಜ್ಯ ಗೌರವಾಧ್ಯಕ್ಷ ಎಂ ರಾಮೇಗೌಡ ,ರಾಜ್ಯಾಧ್ಯಕ್ಷ ಬಸವರಾಜು ,ಮಹಿಳಾ ರಾಜ್ಯ ಕಾರ್ಯದರ್ಶಿ ಸವಿತಾ ಎಸ್ ಗೌಡ, ಮಂಜುಳಾ , ರಾಜ್ಯ ಕಾರ್ಯದರ್ಶಿ ಸತೀಶ್, ರಾಜ್ಯ ಯುವ ಘಟಕದ ಅಧ್ಯಕ್ಷ ಸಂಜಯ್ ಜಿಲ್ಲಾ ಕಮಿಟಿ ಸದಸ್ಯರಾದ ಸಂತೋಷ್, ರವಿ ,ಸುರೇಶ್, ನಿತೀಶ್, ಮಹೇಶ್ ,ನಾಗೇಶ್ ಇನ್ನಿತರ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X