ಬಾಗಲಕೋಟೆ | ನೀರಿಗಾಗಿ ಜನರ ಪರದಾಟ; ಶಾಶ್ವತ ಪರಿಹಾರಕ್ಕೆ ವೆಲ್ಫೇರ್‌ ಪಾರ್ಟಿ ಮನವಿ

Date:

Advertisements

ಬಾಗಲಕೋಟೆ ಜಿಲ್ಲೆ ಇಳಕಲ್‌ ನಗರದಲ್ಲಿ ಕಳೆದ ಹಲವು ತಿಂಗಳಿನಿಂದ ನೀರಿಗಾಗಿ ಜನ ಪರದಾಡುತ್ತಿದ್ದು, ಕೂಡಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ ಇಳಕಲ್‌ ತಾಲೂಕು ಸಮಿತಿಯು ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಿತು.

“ನಗರದಲ್ಲಿ ಜನರು ದಿನನಿತ್ಯ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಈ ಮೊದಲಿಂದಲೂ ನಗರಸಭೆಗೆ ಮನವಿ ಸಲ್ಲಿಸಿದ್ದು, ಇದುವರೆಗೂ ಯಾವುದೇ ಸರಿಯಾದ ಕ್ರಮ ಕೈಗೊಳ್ಳದಿರುವುದು ಜನತೆಯಲ್ಲಿ ಅಸಮಾಧಾನ ಹುಟ್ಟಿಸಿದೆ. ಜನರ ಕಷ್ಟ ನಿರಂತರವಾಗಿ ಹೆಚ್ಚುತ್ತಿದ್ದು, ನಗರಪಾಲಿಕೆಯ ನಿರ್ಲಕ್ಷ್ಯ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ” ಎಂದು ಸಮಿತಿಯ ಪದಾಧಿಕಾರಿಗಳು ಆರೋಪಿಸಿದರು.

“ನೀರಿನ ಸರಬರಾಜು ವ್ಯವಸ್ಥೆಯನ್ನು ತಕ್ಷಣ ಸುಧಾರಿಸಬೇಕು ಮತ್ತು ನಿರಂತರ ನೀರಿನ ಪೂರೈಕೆ ಖಾತ್ರಿಯಾಗಬೇಕು. ಶಾಶ್ವತ ಪರಿಹಾರಕ್ಕಾಗಿ ದೀರ್ಘಾವಧಿ ಯೋಜನೆ ರೂಪಿಸುವುದಾಗಿ ಜನರಿಗೆ ಭರವಸೆ ನೀಡಬೇಕು. ಈಗಲೂ ಕೂಡ ಪ್ರಯೋಜನಕಾರಿ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಮುಂದುವರಿದರೆ, ವೆಲ್ಫೇರ್ ಪಾರ್ಟಿ ಜನರ ಹಕ್ಕಿಗಾಗಿ ತೀವ್ರ ಹೋರಾಟ ಮಾಡಲು ನಿರ್ಧರಿಸಿದೆ. ಇದಕ್ಕೆ ಅವಕಾಶ ಕೊಡದೆ ಸಾರ್ವಜನಿಕ ಸಮಸ್ಯೆ ಬಗೆಹರಿಸಬೇಕು” ಎಂದು ಎಚ್ಚರಿಕೆ ನೀಡಿದರು.

Advertisements

ಇದನ್ನೂ ಓದಿ: ಬಾಗಲಕೋಟೆ | ನರೇಗಾ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿಯ ಬಾಗಲಕೋಟೆ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಜಾಕ್ ಕಲಾಲ್, ಜಿಲ್ಲಾ ಉಪಾಧ್ಯಕ್ಷ ಆಫ್ಜಲ್ ಹುಮ್ನಾಬಾದ್, ಇಳಕಲ್ ಅಧ್ಯಕ್ಷ ಸಿರಾಜ ಹುಣಚಗಿ, ರಫೀಕ್ ಬಲ್ಗನೂರ್, ಲಾಲ್ ಸಾಬ್ ಬಂಡಾರಿ, ಮುರ್ತುಜಾ ಸೈ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X