ರಾಯಚೂರು | ಹದಿಹರೆಯದ ಮಕ್ಕಳ ಸಮಸ್ಯೆ-ಪರಿಹಾರಕ್ಕೆ ಜಾಗೃತಿ ಕೇಂದ್ರ ಆರಂಭ

Date:

Advertisements

ಹದಿಹರೆಯದವರ ಸಮಸ್ಯೆಗಳು ಮತ್ತು ಪರಿಹಾರಕ್ಕಾಗಿ ರಾಯಚೂರಿನ ಎಂ ಕೆ ಭಂಡಾರಿ ಆಸ್ಪತ್ರೆಯಲ್ಲಿ ಜಾಗೃತಿ ಹಾಗೂ ಸಲಹಾ ಕೇಂದ್ರವನ್ನು ಆರಂಭಿಸಲಾಗಿದ್ದು, ನಾಳೆಯಿಂದ (ಮಾ.13) ಕಾರ್ಯಾರಂಭ ಮಾಡಲಿದೆ ಎಂದು ರಿಮ್ಸ್ ಮಕ್ಕಳ ತಜ್ಞ ಡಾ.ಬಾಲಸುಬ್ರಮಣ್ಯಮ್ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಡಿಯಲ್ಲಿ ಮಾತನಾಡಿ, “ಇಂದಿನ ಹದಿಹರೆಯದ ಮಕ್ಕಳೇ ದೇಶದ ಭವಿಷ್ಯದ ಜನತೆಯಾಗಿದ್ದು, ಅವರ ಆರೋಗ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ಹಿನ್ನಲೆ ರಾಷ್ಟ್ರೀಯ ಯುವ ದಿನಾಚರಣೆ ನಿಮಿತ್ತ ಸಮಾಜದಲ್ಲಿನ ಹದಿಹರೆಯದವರ ಸಮಸ್ಯೆ ಮತ್ತು ಪರಿಹಾರಗಳ ಕುರಿತು ಮಾಹಿತಿ ನೀಡಲಾಗುವುದೆಂದರು. 10 ರಿಂದ 19 ವಯಸ್ಸಿನ ಮಕ್ಕಳು ಕೋಪ, ಅಸಹನೆ ವ್ಯಕ್ತಪಡಿಸುವುದು ಸಹಜ. ಈ ಹಂತದಲ್ಲೇ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗಳಾಗತ್ತವೆ. ಆದ್ದರಿಂದ ಮಕ್ಕಳಿಗೆ ಸಮಸ್ಯೆ ಮತ್ತು ಪರಿಹಾರಗಳನ್ನು ಕಂಡುಕೊಳ್ಳಲು ಜಾಗೃತಿ ಮೂಡಿಸಲಾಗುವುದು” ಎಂದು ತಿಳಿಸಿದರು.

“ಮಕ್ಕಳ ಬೆಳವಣಿಯಲ್ಲಿ ಶಿಕ್ಷಕರು ಹಾಗೂ ಪೋಷಕರ ಪಾತ್ರ ಮುಖ್ಯವಾಗಿರುತ್ತದೆ. ಮಕ್ಕಳು ಓದುವ ವಿಚಾರದಲ್ಲಿ ಖಿನ್ನತೆಗೆ ಒಳಗಾಗದ ಮಾನಸಿಕ, ದೈಹಿಕವಾಗಿ ಕುಗ್ಗುವ ಸಾಧ್ಯತೆ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಮುಂದಾಗುವವರಲ್ಲಿ ಹದಿಹರೆಯದ ವಯಸ್ಸಿನ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. ಇದು ಅತ್ಯಂತ ಆತಂಕ ಹಾಗೂ ಅಪಾಯಕಾರಿ. ಹೀಗಾಗಿ ಶೈಕ್ಷಣಿಕ ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳು ಅತ್ಯಗತ್ಯ. ಈ ಕಾರ್ಯಕ್ರಮಗಳಲ್ಲಿ ಮಕ್ಕಳು ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

Advertisements

ಇದನ್ನೂ ಓದಿ: ರಾಯಚೂರು | ದುರಸ್ತಿ ವೇಳೆ ಶಾಕ್; ಜೆಸ್ಕಾಂ ಸಿಬ್ಬಂದಿಗೆ ಗಾಯ

ಈ ವೇಳೆ ಭಂಡಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಿಯಾಜುದ್ದೀನ್, ಮಕ್ಕಳ ತಜ್ಞೆ ಡಾ. ಚೈತ್ರ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X