ಬೆಳಗಾವಿ | ಮಹಾ ಕುಂಭಮೇಳದ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಬಿಡುಗಡೆ

Date:

Advertisements

ಪ್ರಯಾಗ್​ರಾಜ್ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ಬೆಳಗಾವಿಯ ನಾಲ್ವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರಯಾಗ್‌ರಾಜ್ ಜಿಲ್ಲಾಧಿಕಾರಿ ರವಿ ಮಂದರ್ ಅವರ ಜತೆಗೆ ಮಾತುಕತೆ ನಡೆಸಿ ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ‌ ಅವರ ಕುಟುಂಬಸ್ಥರ ಖಾತೆಗಳಿಗೆ ನೇರವಾಗಿ ಪರಿಹಾರ ಧನ ಜಮೆಯಾಗಿದೆ. ನಾವು ಗ್ರಾಮಲೆಕ್ಕಾಧಿಕಾರಿ ಮೂಲಕ ಪರಿಶೀಲಿಸಿದ್ದೇವೆ” ಎಂದರು.

“ಮೃತದೇಹಗಳ ವರದಿಯಲ್ಲಿ ಒಂದಿಬ್ಬರ ಹೆಸರಿನಲ್ಲಿ ಅಕ್ಷರದೋಷ ಕಂಡು ಬಂದಿರುವ ಕುರಿತು ಮೃತರ ಕುಟುಂಬಸ್ಥರು ತಿಳಿಸಿದ್ದರು. ಹಾಗಾಗಿ, ಅದನ್ನು ಅನುಮೋದಿಸಿ, ಸರಿಪಡಿಸಿ ಹೆಸರುಗಳನ್ನು ಪ್ರಯಾಗ್‌ರಾಜ್ ಜಿಲ್ಲಾಧಿಕಾರಿಗಳಿಗೆ ವಾಟ್ಸ್​ಆ್ಯಪ್​ ಮತ್ತು ಮೇಲ್ ಮೂಲಕ ಕಳಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಮರಣೋತ್ತರ ವರದಿ ಮತ್ತು ಮರಣ ಪ್ರಮಾಣಪತ್ರವನ್ನು ಕಳುಹಿಸಿಕೊಡುವ ಬಗ್ಗೆ ಪ್ರಯಾಗ್​ರಾಜ್ ಜಿಲ್ಲಾಡಳಿತ ನಮಗೆ ಭರವಸೆ ನೀಡಿದೆ” ಎಂದು ಮೊಹಮ್ಮದ್ ರೋಷನ್ ಇದೇ ವೇಳೆ ಸ್ಪಷ್ಟಪಡಿಸಿದರು.

Advertisements

ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಎರಡು ಬಸ್​ಗಳಲ್ಲಿ ಬೆಳಗಾವಿಯ 60 ಮಂದಿ ಜನವರಿ 26ರಂದು ಪ್ರಯಾಗ್​ರಾಜ್‌ಗೆ ತೆರಳಿದ್ದರು. ಇವರಲ್ಲಿ ನಾಲ್ವರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಉಳಿದ 56 ಮಂದಿ ಸುರಕ್ಷಿತವಾಗಿರುವುದಾಗಿ ಅಂದೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಿಗಂತ್ ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಭರತ್ ಶೆಟ್ಟಿ, ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

“ಟ್ರಾವೆಲ್ಸ್‌ನವರು​ ಊಟ, ಉಪಹಾರ ಸೇರಿ ಎಲ್ಲ ವ್ಯವಸ್ಥೆಯನ್ನು ಒಳ್ಳೆಯ ರೀತಿ ಮಾಡಿದ್ದಾರೆ‌. ನಮ್ಮ ವಾಹನ ಪ್ರಯಾಗ್​ರಾಜ್‌ನಿಂದ 30-40 ಕಿಮೀ ದೂರದಲ್ಲಿತ್ತು. ಹಾಗಾಗಿ, ಗುಂಪುಗಳನ್ನಾಗಿ ವಿಂಗಡಿಸಿ 2 ಗಂಟೆಯೊಳಗೆ ನದಿಯಲ್ಲಿ ಸ್ನಾನ ಮಾಡಿ ಬರುವಂತೆ ತಿಳಿಸಿದ್ದರು‌‌. ಅದೇ ರೀತಿ ಬ್ರಾಹ್ಮಿ ಮುಹೂರ್ತದಲ್ಲಿ ಸ್ನಾನಕ್ಕೆಂದು 9 ಜನರ ಗುಂಪು ತೆರಳಿತ್ತು. ಆ ವೇಳೆ ಏಕಾಏಕಿ ಕಾಲ್ತುಳಿತ ಉಂಟಾಗಿ ನಾಲ್ಕು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಾಯಿರಥ ಟ್ರಾವೆಲ್ಸ್‌​ನವರದ್ದು ಯಾವುದೇ ತಪ್ಪಿಲ್ಲ, ಸುರಕ್ಷಿತವಾಗಿ ಹೋಗಿ ವಾಪಸ್​ ಬಂದು ಬಸ್‌ ಹತ್ತುವಂತೆ ಅವರು ಮೊದಲೇ ನಮಗೆ ತಿಳಿಸಿದ್ದರು” ಎಂದು 56 ಜನರಿದ್ದ ತಂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿತ್ತು.

ಆರಂಭದಲ್ಲಿ ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ(50) ಮತ್ತು ಪುತ್ರಿ ಮೇಘಾ ಹತ್ತರವಾಟ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದಾದ ಬಳಿಕ ಪತ್ನಿ ಜತೆಗೆ ಪ್ರಯಾಗ್​ರಾಜ್‌ಗೆ ತೆರಳಿದ್ದ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಮೃತಪಟ್ಟಿರುವ ಮಾಹಿತಿ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X