ಬೆಳಗಾವಿ | ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ಪರಿಹಾರ

Date:

Advertisements

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರ ನೀಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಮಾಹಿತಿ ನೀಡಿದ್ದಾರೆ.

ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ನೇರವಾಗಿ ಜಮೆ ಮಾಡಲಾಗಿದೆ. “ಪ್ರಯಾಗ್‌ರಾಜ್‌ ಜಿಲ್ಲಾಧಿಕಾರಿ ರವಿ ಮಂದರ್‌ ಅವರೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಕಳುಹಿಸಿಕೊಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಇದನ್ನು ಪರಿಶೀಲಿಸಿದ್ದೇವೆ,” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ದುರಂತದಲ್ಲಿ ಬೆಳಗಾವಿಯ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ನಾಲ್ವರು ಕಾಲ್ತುಳಿತದಲ್ಲಿ, 10 ಮಂದಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ, ಮತ್ತು ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ.

Advertisements

ಮರಣೋತ್ತರ ವರದಿ ಮತ್ತು ಪ್ರಮಾಣಪತ್ರದ ಸಂಬಂಧ ಕೆಲವು ಅಕ್ಷರದೋಷಗಳಿದ್ದರಿಂದ ಮೃತರ ಕುಟುಂಬಸ್ಥರು ಪರಿಷ್ಕರಣೆಗಾಗಿ ಮನವಿ ಮಾಡಿದ್ದರು. “ಈ ತಪ್ಪುಗಳನ್ನು ಸರಿಪಡಿಸಿ, ಪ್ರಯಾಗ್‌ರಾಜ್ ಜಿಲ್ಲಾಡಳಿತಕ್ಕೆ ವಾಟ್ಸ್‌ಆ್ಯಪ್ ಮತ್ತು ಮೇಲ್ ಮೂಲಕ ಕಳಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಶಾಸನಾತ್ಮಕ ದಾಖಲೆಗಳು ಒದಗಿಸಲಾಗುವುದು,” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X