ನಟಿ ರಶ್ಮಿಕಾಗೆ ಆಪ್ತ ಸಹಾಯಕನಿಂದಲೇ ₹80 ಲಕ್ಷ ವಂಚನೆ

Date:

Advertisements
  • ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದ ವ್ಯಕ್ತಿಯಿಂದಲೇ ವಂಚನೆ
  • ವಿಚಾರ ತಿಳಿಯುತ್ತಲೇ ಆಪ್ತ ಸಹಾಯಕನನ್ನು ಕೆಲಸದಿಂದ ವಜಾಗೊಳಿಸಿದ ನಟಿ

ಖ್ಯಾತ ನಟಿ ರಶ್ಮಿಕಾ ಮಂದಣ್ಣ ತಮ್ಮ ಆಪ್ತ ಸಹಾಯಕನಿಂದಲೇ ವಂಚನೆಗೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ಕೆಲ ವರ್ಷಗಳಿಂದ ನಟಿಗೆ ಆಪ್ತ ಸಹಯಾಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬರೋಬ್ಬರಿ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾನೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

2016ರಲ್ಲಿ ತೆರೆಕಂಡಿದ್ದ ಕನ್ನಡದ ʼಕಿರಿಕ್‌ ಪಾರ್ಟಿʼ ಸಿನಿಮಾ ಮೂಲಕ ಬೆಳ್ಳಿ ತೆರೆ ಪ್ರವೇಶಿಸಿದ್ದ ರಶ್ಮಿಕಾ ಮಂದಣ್ಣ, ಆರೇಳು ವರ್ಷಗಳ ಅವಧಿಯಲ್ಲಿ ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ನಟಿಯಾಗಿ ಜನಪ್ರಿಯತೆ ಗಳಿಸಿದ್ದಾರೆ. ಮೊದಲ ಚಿತ್ರದ ಯಶಸ್ಸಿನ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ರಶ್ಮಿಕಾ, ತಮ್ಮ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುವ ಸಲುವಾಗಿ ಆಪ್ತ ಸಹಾಯಕನನ್ನು ನೇಮಿಸಿಕೊಂಡಿದ್ದರು. ಇದೇ ವ್ಯಕ್ತಿ ಸದ್ಯ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾನೆ. ಈ ವಿಚಾರ ತಿಳಿಯುತ್ತಲೇ ರಶ್ಮಿಕಾ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರಶ್ಮಿಕಾ ಆಗಲಿ ಅಥವಾ ಅವರ ಕುಟುಂಬಸ್ಥರಾಗಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ರಾಷ್ಟ್ರೀಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಂಚನೆಯ ಸುದ್ದಿ ಹರಿದಾಡಿದ ಬಳಿಕವೂ ರಶ್ಮಿಕಾ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಆದಿಪುರುಷ್‌ ಚಿತ್ರತಂಡದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ʼಹಿಂದೂ ಸೇನಾʼ ಮುಖಂಡ

ಅಮಿತಾಭ್‌ ಬಚ್ಚನ್‌ ಮುಖ್ಯಭೂಮಿಕೆಯ ʼಗುಡ್‌ ಬೈʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಇತ್ತೀಚೆಗೆ ಬಾಲಿವುಡ್‌ ಪ್ರವೇಶಿಸಿದ್ದ ರಶ್ಮಿಕಾ, ʼಮಿಶನ್‌ ಮಜನುʼ ಚಿತ್ರದಲ್ಲೂ ಮಿಂಚಿದ್ದರು. ಸದ್ಯ ರಣಭೀರ್‌ ಕಪೂರ್‌ ಅಭಿನಯದ ʼಅನಿಮಲ್‌ʼ‌ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸುತ್ತಿದ್ದು, ಅಲ್ಲು ಅರ್ಜುನ್‌ ನಟನೆಯ ʼಪುಷ್ಪ-2ʼ ಚಿತ್ರದಲ್ಲೂ ತೊಡಗಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X