ಸುರೇಶ್‌ಗೆ ರಾಜಕೀಯ ವೈರಾಗ್ಯವಿಲ್ಲ; ಹೊಸಬರನ್ನು ಬೆಳೆಸುವ ಇಚ್ಛೆಇದೆ: ಸಚಿವ ಡಿಕೆಶಿ

Date:

Advertisements
  • ಸಹೋದರ ಡಿ ಕೆ ಸುರೇಶ್ ರಾಜಕಿಯ ಭವಿಷ್ಯದ ಬಗ್ಗೆ ಮಾತನಾಡಿದ ಡಿಕೆಶಿ
  • ಅಕ್ಕಿ ರಾಜಕೀಯ ಮಾಡಲು ಹೊರಟ ಕೇಂದ್ರದ ವಿರುದ್ಧ ನಾಳೆ ʼಕೈʼ ಪ್ರತಿಭಟನೆ

ಡಿ ಕೆ ಸುರೇಶ್‌ಗೆ ಬೇರೆಯವರನ್ನು ಬೆಳೆಸಬೇಕೆಂಬ ಇಚ್ಚೆ ಇದೆ. ಹಾಗಾಗಿ ಅವರು ನನಗೆ ರಾಜಕಾರಣ ಸಾಕಾಗಿದೆ ಎಂದಿದ್ದಾರೆಯೇ ಹೊರತು ರಾಜಕೀಯ ವೈರಾಗ್ಯದ ಕಾರಣಕ್ಕಲ್ಲ ಎಂದು ಸಚಿವ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ತಮ್ಮ ಸಹೋದರ ಡಿ ಕೆ ಸುರೇಶ್ ತಮ್ಮ ರಾಜಕೀಯ ಜೀವನದ ಕುರಿತು ನೀಡಿದ್ದ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು” ಎಂದರು.

“ಸುರೇಶ್ ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎನ್ನುವ ಆಸೆ ಇದೆ. ಆವರು ಆ ಹಿನ್ನೆಲೆಯಲ್ಲಿ ರಾಜಕೀಯ ಸಾಕಾಗಿದೆ ಎಂದಿರಬಹುದು. ಆದರೆ ಮಾಧ್ಯಮದವರು ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಹೇಗೆ” ಎಂದರು.

Advertisements

ಇನ್ನು ಮಾಜಿ ಸಚಿವ ಆರ್ ಅಶೋಕ್ ‌ ಹೇಳಿಕೆ ಕುರಿತು ಕೇಳಿದಾಗ, ‘ಅಶೋಕ್ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದರು.

“ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ. ನಮ್ಮ ಬಗ್ಗೆ ಮಾತನಾಡುವ ಅಶೋಕ್ ಅವರ ಪಕ್ಷ ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಶಿವಕುಮಾರ್ ಹೇಳಿದರು.

ಕೇಂದ್ರ ಸರ್ಕಾರದ ಅಕ್ಕಿ ರಾಜಕೀಯದ ಬಗ್ಗೆ ಮಾತನಾಡಿದ ಶಿವಕುಮಾರ್, “ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ?:ಅನ್ನಭಾಗ್ಯ: ರಾಜ್ಯದಲ್ಲೇ ಬೇಡಿಕೆ ಪೂರೈಕೆಯಷ್ಟು ಅಕ್ಕಿ ಇದ್ದರೆ ಇಲ್ಲೇ ಖರೀದಿ: ಸಿಎಂ ಸಿದ್ದರಾಮಯ್ಯ

“ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡುವುದು ಹಾಗೂ ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ತೀರ್ಮಾನಿಸಿದೆ. ಪುಕ್ಕಟ್ಟೆ ಅಕ್ಕಿ ನೀಡಿ ಎಂದು ನಾವು ಅವರಲ್ಲಿ ಕೇಳಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ. ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದ್ದು, ಆರಂಭದಲ್ಲಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X