ಚಿತ್ರದುರ್ಗ | ವಿಮುಕ್ತಿ ವಿದ್ಯಾಸಂಸ್ಥೆ, ಧಮ್ಮ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ.

Date:

Advertisements

ವಿಮುಕ್ತಿ ವಿದ್ಯಾಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಾಲಕಿಯರ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ವಿಷಯಗಳ ಕುರಿತು ಮತ್ತು ಬಾಲ್ಯವಿವಾಹ ಹಾಗೂ ಬಾಲ್ಯ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಯಿತು.

ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಆರ್ ವಿಶ್ವಸಾಗರ್ ವಿಷಯಗಳ ಕುರಿತು ಮಾತನಾಡಿ, “ಇಂದು ಸಮಾಜದಲ್ಲಿ ಹದಿಹರೆಯದ ಕಿಶೋರಿಯರ ಮೇಲೆ ದೌರ್ಜನ್ಯಗಳಾಗುತ್ತಿದೆ.‌ ಬಾಲಕಿಯರಿಗೆ ಅರಿವು ಮೂಡಿಸಲು ವಿಮುಕ್ತಿ ವಿದ್ಯಾಸಂಸ್ಥೆಯಿಂದ ಸುಮಾರು 25 ಹಳ್ಳಿಗಳಲ್ಲಿ ಗುಂಪು ರಚನೆ ಮಾಡಲಾಗಿದೆ. ಒಂದು ಗುಂಪಿನಲ್ಲಿ 30 ಕಿಶೋರಿಯರು ಇರುವಂತೆ ನಕ್ಷತ್ರ ಕಿಶೋರಿಯರ ಗುಂಪುಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜೊತೆಯಾಗಿ ನಕ್ಷತ್ರ ಕಿಶೋರಿಯರ ಪಾರ್ಲಿಮೆಂಟ್ ಸಹ ರಚನೆಯಾಗಿದೆ ಈ ಪಾರ್ಲಿಮೆಂಟಿನಲ್ಲಿ ಒಂದು ಹಳ್ಳಿಯ ಸಂಘದಿಂದ ಎರಡು ಜನ ಲೀಡರ್ ಗಳನ್ನು ನೇಮಿಸಲಾಗಿದೆ” ಎಂದು ವಿವರಿಸಿದರು.

1001679524
ಚಿತ್ರದುರ್ದ ವಿಮುಕ್ತಿ, ಧಮ್ಮಕೇಂದ್ರದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು

ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕ ಅಧ್ಯಕ್ಷರಾದ ಅನ್ನಪೂರ್ಣ ಮುಂದಿನ ಆರು ತಿಂಗಳುಗಳಲ್ಲಿ ಕಿಶೋರಿಯರಿಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಸಂಸ್ಥೆಯ ಸಮುದಾಯ ಸಂಘಟಕ ಅರಣ್ಯ ಸಾಗರ್ ಕ್ರೀಡೆಗಳನ್ನು ಆಯೋಜಿಸಿದ್ದರು. ಆಶಾ ಮತ್ತು ಅಂಗನವಾಡಿ ಹಾಗೂ ಸ್ವಯಂಸೇವಕರಿಗೆ ಬಹುಮಾನಗಳ ವಿತರಣೆಯನ್ನು ಮಾಡಲಾಯಿತು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ‘ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ’; ಕ್ರಾಂತಿಕಾರಿ ಪಾದಯಾತ್ರೆ

ಕಾರ್ಯಕ್ರಮದಲ್ಲಿ ಸಂಯೋಜಕರಾದ ಶ್ರೀಮತಿ ಬೀಬಿಜಾನ್, ಶ್ರೀಮತಿ ನಾಗರತ್ನ ಕೆಬಿ ಹಾಗೂ ಆಶಾ ಕಾರ್ಯಕರ್ತೆಯರು. ಅಂಗನವಾಡಿ ಕಾರ್ಯಕರ್ತೆಯರು. ಮಹಿಳಾ ಸಂಘದ ಸ್ವಯಂ ಸೇವಕರು, ವಿದ್ಯಾರ್ಥಿ ಸೇವಕರು ಮತ್ತು ವಿಮುಕ್ತಿ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಇಡೀ ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತದೆ. ಶಾಲೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ರಾಜಕೀಯ...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ...

ಚಿತ್ರದುರ್ಗ | ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಸಬಲೀಕರಣ; ಸಚಿವ ಡಿ.ಸುಧಾಕರ್ ಅಭಿಮತ

"ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ...

Download Eedina App Android / iOS

X