ನೇಕಾರರಿಗೆ ಉದ್ಯೋಗ ಒದಗಿಸಲು ಕ್ರಮ: ಜವಳಿ ಸಚಿವ ಶಿವಾನಂದ ಪಾಟೀಲ

Date:

Advertisements

ನೇಕಾರರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದ್ದು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳು, ಆರೋಗ್ಯ ಕೇಂದ್ರಗಳಿಗೆ ಬೆಡ್‌ಶೀಟ್‌ ಹಾಗೂ ಟವೆಲ್‌ಗಳನ್ನು ಪೂರೈಕೆ ಮಾಡಲು ಬೇಡಿಕೆ ಪಡೆಯಲಾಗುತ್ತಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ವಿಧಾನಸಭೆಗೆ ತಿಳಿಸಿದ್ದಾರೆ.

ಸಿದ್ದು ಸವದಿ ಅವರ ಗಮನ ಸೆಳೆಯುವ ಸೂಚನೆ ನಿಯಮ 73ರ ವಿಷಯಕ್ಕೆ ಉತ್ತರಿಸಿದ ಸಚಿವರು, ನೇಕಾರರಿಗೆ ನೆರವಾಗಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆಯ ಸಮವಸ್ತ್ರಕ್ಕೆ ಅಗತ್ಯವಾದ 21.15 ಲಕ್ಷ ಮೀಟರ್ ಬಟ್ಟೆಯನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ 3,567 ನೋಂದಾಯಿತ ನೇಕಾರರಿಂದ ತಯಾರಿಸಿ ಪೂರೈಕೆ ಮಾಡಲಾಗುವುದು” ಎಂದು ಹೇಳಿದರು.

“ವಿದ್ಯಾವಿಕಾಸ ಸಮವಸ್ತ್ರ ಸರಬರಾಜಿಗೆ ಅಗತ್ಯ ಒಟ್ಟು ಬಟ್ಟೆಯ ಪ್ರಮಾಣಕ್ಕೆ ಅನುಗುಣವಾಗಿ ಅಲ್ಲಿನ ಉಪಕೇಂದ್ರಗಳಲ್ಲಿ ಎಲ್ಲ ನೇಕಾರರಿಗೆ ನಿರಂತರ ನೂಲು ಸರಬರಾಜು ಮಾಡುತ್ತಿದ್ದು, ನೇಕಾರರು ನೇಯುವ ಬಟ್ಟೆಗೆ ನಿಗದಿತ ಪರಿವರ್ತನಾ ಶುಲ್ಕ ಪಾವತಿ ಮಾಡಲಾಗುವುದು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವು ಬಾಗಲಕೋಟ ಜಿಲ್ಲೆಯ ತೇರದಾಳ ವ್ಯಾಪ್ತಿಯ ರಬಕವಿ, ಬನಹಟ್ಟಿ, ತೇರದಾಳ, ಚಿಮ್ಮಡ, ಕೆಂಗೇರಿಮಡಿ, ಮಹಾಲಿಂಗಪುರ, ಹೊಸೂರು ಮತ್ತು ನಾವಲಗಿಯಲ್ಲಿ ಉಪಕೇಂದ್ರಗಳನ್ನು ಹೊಂದಿದ್ದು, ಈ ಕೇಂದ್ರಗಳಲ್ಲಿ ವಿದ್ಯಾ ವಿಕಾಸ ಯೋಜನೆಯ ಸಮವಸ್ತ್ರ ಬಟ್ಟೆ ತಯಾರಿಸಲಾಗುತ್ತಿದೆ” ಎಂದರು.

Advertisements

“2024-25ನೇ ಸಾಲಿನಲ್ಲಿ 21 ಸಹಕಾರ ಸಂಘ ಹಾಗೂ ಸಹಕಾರ ಬ್ಯಾಂಕುಗಳ ಮೂಲಕ 752 ನೇಕಾರರಿಗೆ ಒಟ್ಟು 59.31 ಲಕ್ಷ ರೂ. ಬಡ್ಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷೀಕ ಐದು ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ. ಕೈಮಗ್ಗ ವಿಕಾಸ ಯೋಜನೆಯಡಿ ಕೈಮಗ್ಗ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಘಟಕ ವೆಚ್ಚದ ಪ್ರತಿಶತ 50ರಷ್ಟು ಸಹಾಯಧನ ಒದಗಿಸಲಾಗುತ್ತಿದೆ” ಎಂದು ಹೇಳಿದರು.

“ಕಚ್ಚಾ ಮಾಲ್ ಖರೀದಿ ಮೇಲೆ ಕೈಮಗ್ಗ ಸಹಕಾರ ಸಂಘಗಳಿಗೆ ಪ್ರತಿ ಕೆಜಿಗೆ 15‌ ರೂ. ಸಹಾಯಧನ ನೀಡಲಾಗುವುದು. ನೇಕಾರಿಕೆಗೆ ಸಹಕಾರ ಸಂಘ ಮತ್ತು ಸಹಕಾರ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೂನ್ಯ ಹಾಗೂ ಪ್ರತಿಶತ ಒಂದರ ಬಡ್ಡಿ ದರದಲ್ಲಿ 2 ಲಕ್ಷ ಹಾಗೂ ಪ್ರತಿಶತ 3 ರ ಬಡ್ಡಿ ದರದಲ್ಲಿ 2 ರಿಂದ 5 ಲಕ್ಷದವರೆಗೆ ಸಾಲ ನೀಡಲಾಗುವುದು” ಎಂದು ವಿವರಿಸಿದರು.

“ಕೈಮಗ್ಗ ಉತ್ಪನ್ನಗಳ ಮಾರಾಟಕ್ಕಾಗಿ ರಾಷ್ಟ್ರೀಯ ಹಾಗೂ ರಾಜ್ಯ ಕೈಮಗ್ಗ ಮೇಳ ಆಯೋಜಿಸಲಾಗುತ್ತಿದೆ. ಇಲಕಲ್ ಸೀರೆ, ಗುಳೇದಗುಡ್ಡ ಖಣ, ಮೊಳಕಾಲ್ಮುರು ರೇಷ್ಮೆ ಸೀರೆ ಮತ್ತು ಉಡುಪಿಯ ಕಾಟನ್ ಸೀರೆಗಳನ್ನು ಜಿಯಾಗ್ರಫಿಕಲ್ ಇಂಡಿಕೇಷನ್ ಕಾಯ್ದೆ ಅಡಿಯಲ್ಲಿ ನೋಂದಾಯಿಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X