ಚಿಕ್ಕಮಗಳೂರು l ಪೊಲೀಸರಿಂದ ಹೋಂ ಸ್ಟೇ, ರೆಸಾರ್ಟ್ಸ್, ಲಾಡ್ಜ್ ಮಾಲೀಕರಿಗೆ ಮಾರ್ಗಸೂಚಿ 

Date:

Advertisements

ಜಿಲ್ಲಾ ಮಟ್ಟದ ಹೋಂ ಸ್ಟೇ, ರೆಸಾರ್ಟ್ಸ್ ಹಾಗೂ ಲಾಡ್ಜ್ಸ್ ಮಾಲೀಕರು/ವ್ಯವಸ್ಥಾಪಕರುಗಳ ಸಭೆ ನಡೆಸಿ ಸೂಕ್ತ ತಿಳುವಳಿಕೆ, ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಿಲ್ಲಾ ಪೊಲೀಸ್ ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಸಭೆ ನಡೆಸಲಾಯಿತು.

ಜಿಲ್ಲೆಯಲ್ಲಿನ ಎಲ್ಲಾ ಪ್ರವಾಸಿ ತಾಣಗಳಲ್ಲಿನ ಹೋಂ ಸ್ಟೇಗಳು ರೆಸಾರ್ಟ್ & ಲಾಡ್ಜ್ಸ್ ಗಳಲ್ಲಿ ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಯ ಸಂಬಂಧ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳುವುದು. ಹೊರ ವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿಯನ್ನು ಪಡೆಯಬೇಕು.

Screenshot 2025 03 13 18 56 46 13 7352322957d4404136654ef4adb64504

ಪೊಲೀಸರ ಅನುಮತಿ ಇಲ್ಲದೆ, ನಿರ್ಜನ ಪ್ರದೇಶ ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ದಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡುಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಹೋಂ ಸ್ಟೇ, ರೆಸಾರ್ಟ್ ಅಥವಾ ಲಾಡ್ಜ್ ಮಾಲೀಕರುಗಳೇ ಜವಾಬ್ದಾರರಾಗಿರುತ್ತಾರೆ ಹಾಗೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಎಸ್ಪಿ ಡಾ.ವಿಕ್ರಂ ಅಮಟೆ ತಿಳಿಸಿದರು.

Advertisements

 ರೆಸಾರ್ಟ್ ಗಳು / ಹೋಮ್ ಸ್ಟೇಗಳನ್ನು ನಿರ್ವಹಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು:

1) ಹೋಂ ಸ್ಟೇಗಳು / ರೆಸಾರ್ಟ್ ಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು.  2) ಡ್ರಗ್ಸ್ ಮತ್ತು ಮಾದಕ ವಸ್ತುಗಳ ಬಳಕೆ,ಮಾರಾಟ, ಸಂಗ್ರಹಣೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದನ್ನು ಎಲ್ಲಾ ಅತಿಥಿಗಳಿಗೆ ಗೋಚರಿಸುವಂತೆ ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಬೇಕು.   3) ವಿದೇಶಿ ಪ್ರಜೆಗಳ ಆಗಮನದ ಬಗ್ಗೆ ತಕ್ಷಣ ಮಾಹಿತಿ ನೀಡಬೇಕು ಮತ್ತು ಫಾರ್ಮ್-ಸಿ ಅನ್ನು ತಕ್ಷಣ ಸ್ಥಳೀಯ ಪೊಲೀಸ್ ಠಾಣೆ ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಕಳುಹಿಸಬೇಕು.  4) ಆವರಣದ ಮುಖ್ಯ ದ್ವಾರ, ಒಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಸಿಸಿಟಿವಿ ದೃಶ್ಯಾವಳಿಗಳನ್ನು ಕನಿಷ್ಠ ಮೂರು ತಿಂಗಳವರೆಗೆ ಸಂಗ್ರಹಿಸಿಡಬೇಕು. 5) ವಿದೇಶಿ ಪ್ರಜೆಗಳು ಸೇರಿದಂತೆ ಎಲ್ಲಾ ಅತಿಥಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಹಲವು ಸೂಚನೆಗಳೊಂದಿಗೆ ಜಿಲ್ಲಾ ಪೊಲೀಸರಿಂದ ಮಾಹಿತಿ ತಿಳಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ; ದಾನಿಗಳಿಗೆ ಧನ್ಯವಾದ ಅರ್ಪಿಸಿದ ಶಾಲೆ

ಈ  ವೇಳೆ ಶೈಲೇಂದ್ರ ಪೊಲೀಸ್ ಉಪಾದೀಕ್ಷಕರು ಚಿಕ್ಕಮಗಳೂರು ಉಪ ವಿಭಾಗ, ಕೆ ಸಿ ಆನಂದ್ ಡಿಎಫ್ಓ (ಸಾಮಾಜಿಕ ಅರಣ್ಯ), ರಮೇಶ್ ಬಾಬು ಡಿಎಫ್ಓ ಚಿಕ್ಕಮಗಳೂರು, ನಂದೀಶ್ ಡಿಎಫ್ಓ ಕೊಪ್ಪವಿಭಾಗ, ಶಿವರಾತ್ರಿಶ್ವರ ಸ್ವಾಮಿ ಎಸಿಎಫ್ ಭದ್ರಾ ವೈಲ್ಡ್ ಲೈಫ್, ಉಮರ್ ಬಾಷಾ ಎಸಿಎಫ್ ತರೀಕೆರೆ, ಎ ಎಸ್ ಮೋಹನ್ ಎಸಿಎಫ್ ಚಿಕ್ಕಮಗಳೂರು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ನಾಗರಾಜ್ ಚಿಟ್ಟ ಸೇರಿದಂತೆ ಜಿಲ್ಲೆಯಲ್ಲಿನ ಹೋಂ ಸ್ಟೇ ರೆಸಾರ್ಟ್ ಲಾಡ್ಜ್ಸ್ ಮಾಲೀಕರು /ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X