ವಿನಯ್ ಕುಲಕರ್ಣಿ ಅರ್ಜಿ ಮತ್ತೆ ವಜಾ; ಧಾರವಾಡಕ್ಕಿಲ್ಲ ಪ್ರವೇಶ

Date:

Advertisements

ಧಾರವಾಡ ಪ್ರವೆಶಕ್ಕೆ ಅನುಮತಿ ಕೋರಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ಅವರಿಗೆ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ನಿರ್ಬಂಧ ವಿಧಿಸಿದೆ. ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆಯಲಿದ್ದು, ಮತದಾನ ಮಾಡಲು ಧಾರವಾಡಕ್ಕೆ ಹೋಗಲು ಅನುಮತಿ ನೀಡಬೇಕೆಂದು ಶಾಸಕ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಸಿಬಿಐ ಎಸ್​ಪಿಪಿ ಗಂಗಾಧರ ಶೆಟ್ಟಿ, “ಯೋಗೇಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಯ ತಾಯಿ ಪಾಲಿಕೆ ಸದಸ್ಯರಾಗಿದ್ದಾರೆ. ಅಲ್ಲದೆ, ಆರೋಪಿ ವಿನಯ್ ಕುಲಕರ್ಣಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಪ್ರಭಾವ ಮತ್ತಷ್ಟು ಹೆಚ್ಚಾಗಿದೆ. ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅವರು ಧಾರವಾಡ ಪ್ರವೇಶಿಸಲು ಅನುಮತಿ ನೀಡಬಾರದು” ಎಂದು ವಾದ ಮಂಡಿದ್ದಾರೆ.

Advertisements

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅರ್ಜಿಯನ್ನು ವಜಾಗೊಳಿಸಿದ್ದು, ಅನುಮತಿ ನೀಡಲು ನಿರಾಕರಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಪ್ರಚಾರಕ್ಕಾಗಿ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ಕೋರಿ ಈ ಹಿಂದೆಯೂ ಅರ್ಜಿ ಸಲ್ಲಿಸಿದ್ದರು. ಆಗಲೂ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು. ವಿನಯ್ ಪರವಾಗಿ ಅವರ ಪತ್ನಿ ಮತ್ತು ಕಾರ್ಯಕರ್ತರು ಪ್ರಚಾರ ನಡೆಸಿದ್ದರು. ವಿನಯ್ ಕ್ಷೇತ್ರಕ್ಕೆ ಪ್ರವೇಶಿಸದೆಯೇ ಗೆಲುವು ಸಾಧಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X