ಪತ್ರಿಕೋದ್ಯಮ ಮೌನವಾಗಿರುವುದಿಲ್ಲ: ಖಾಲಿ ಸಂಪಾದಕೀಯ ಪ್ರಕಟಿಸಿದ ತೆಲಂಗಾಣ ಉರ್ದು ದೈನಿಕ

Date:

Advertisements

ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ಪತ್ರಿಕೆಗೆ ನೀಡುತ್ತಿರುವ ಸರ್ಕಾರಿ ಜಾಹೀರಾತನ್ನು ಸಂಪೂರ್ಣ ಸ್ಥಗಿತಗೊಳಿಸಿದೆ ಎಂದು ಆಪಾದಿಸಿದ ಉರ್ದು ದೈನಿಕವೊಂದು ಸಂಪಾದಕೀಯ ಜಾಗವನ್ನು ಖಾಲಿ ಬಿಟ್ಟು ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.

1970ರ ದಶಕದಲ್ಲಿ ಇಂದಿರಾಗಾಂಧಿ ಸರ್ಕಾರ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭವನ್ನು ನೆನಪಿಸುವ ರೀತಿಯಲ್ಲಿ ಪ್ರಸಕ್ತ ರಾಜ್ಯ ಸರ್ಕಾರದ ಲೋಪಗಳನ್ನು ಎತ್ತಿ ಹಿಡಿದ ಕಾರಣಕ್ಕೆ ಪತ್ರಿಕೆಯನ್ನು ಶಿಕ್ಷಿಸಲಾಗುತ್ತಿದೆ ಎಂದು ಮುನ್ಸಿಫ್ ಡೈಲಿ ಆಪಾದಿಸಿದೆ.
ಆದರೆ ಕಾಂಗ್ರೆಸ್ ವಕ್ತಾರರು ಇದನ್ನು ಅಲ್ಲಗಳೆದಿದ್ದು, ಪತ್ರಿಕಾ ಜಾಹೀರಾತಿನ ಮೇಲಿನ ವೆಚ್ಚವನ್ನು ಸರ್ಕಾರ ಕಡಿತಗೊಳಿಸಿದೆ ಎಂದು ಸಮುಜಾಯಿಷಿ ನೀಡಿದ್ದಾರೆ. ಜತೆಗೆ ಯಾರನ್ನು ಬೆಂಬಲಿಸಬೇಕು ಎನ್ನುವುದು ಸರ್ಕಾರದ ವಿಶೇಷಾಧಿಕಾರ ಎಂದು ಸಮರ್ಥಿಸಿಕೊಂಡಿದ್ದಾರೆ.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆದ ಕೋಮು ಗಲಭೆ ಘಟನೆಗಳನ್ನು ಪತ್ರಿಕೆ ಬಹಿರಂಗಪಡಿಸಿತ್ತು. ಪೊಲೀಸ್ ವೈಫಲ್ಯ ಮತ್ತು ಸರ್ಕಾರದ ನಿಷ್ಕ್ರಿಯತೆಯನ್ನು ಎತ್ತಿ ಹಿಡಿದಿತ್ತು. ಚಿಲ್ಕೂರಿನಲ್ಲಿ ಮಸೀದಿಯೊಂದನ್ನು ಕೆಡವಿದ ಘಟನೆಯನ್ನು ವರದಿ ಮಾಡಲಾಗಿತ್ತು. ಅಲ್ಪಸಂಖ್ಯಾತ ವಿದ್ಯಾರ್ಥಿನಿಯರ ಸಮವಸ್ತ್ರದಿಂದ ದುಪ್ಪಟ ತೆಗೆದುಹಾಕಿದ್ದನ್ನು, ವಕ್ಫ್ ಆಸ್ತಿಗಳ ಸಂರಕ್ಷಣೆಗೆ ಸರ್ಕಾರ ವಿಫಲವಾಗಿದ್ದನ್ನು ಕೂಡಾ ಪತ್ರಿಕೆ ಬೆಳಕಿಗೆ ತಂದಿತ್ತು. ಇಮಾಮ್‌ಗಳ ವೇತನ ವಿಳಂಬ, ವಿಚ್ಛೇದಿತ ಮಹಿಳೆಯರಿಗೆ ಜೀವನಾಂಶ ಪಾವತಿಸದೇ ಇರುವುದು ಮತ್ತಿತರ ಕ್ರಮಗಳ ಬಗ್ಗೆಯೂ ಮುನ್ಸಿಫ್ ಪ್ರಶ್ನಿಸಿತ್ತು” ಎಂದು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಥೆರ್ ಮೊಯಿನ್ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಸಮುದಾಯದ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷ: ನಿರ್ಲಕ್ಷ್ಯವೊಂದೆ ಪರಿಹಾರ

ತೆಲಂಗಾಣ ಸರ್ಕಾರದಲ್ಲಿ ಮುಸ್ಲಿಮರಿಗೆ ಪ್ರಾತಿನಿಧ್ಯ ನೀಡದ ರಾಜ್ಯ ಸರ್ಕಾರ ಇದೇ ಕಾರಣಕ್ಕೆ ಮೋದಿ ಸರ್ಕಾರವನ್ನು ಟೀಕಿಸುತ್ತಿದೆ ಎನ್ನುವುದನ್ನೂ ಪತ್ರಿಕೆ ವರದಿ ಮಾಡಿತ್ತು ಎಂದು ವಿವರಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ತೆಲಂಗಾಣ ಹಾಲು ಮತ್ತು ಜೇನಿನ ನಾಡಾಗಿ ಪರಿವರ್ತನೆಯಾಗಿದೆ ಎಂದು ಓದುಗರ ಮನವೊಲಿಸಬೇಕು ಎಂದು ಸರ್ಕಾರ ನಿರೀಕ್ಷಿಸಿದರೆ, ನಾವು ಹಾಗೆ ಮಾಡಲು ಸಾಧ್ಯವಿಲ್ಲ. ಬದಲಾಗಿ ನಾವು ಭೂಮಿ ಏಕೆ ಬರಡಾಗಿದೆ? ಬಡವರನ್ನು ಹಸಿವು ಏಕೆ ಮಾಡುತ್ತಿದೆ?ಎಂದು ನಾವು ಪ್ರಶ್ನಿಸುವುದನ್ನು ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X