ಮಂಡ್ಯ | ತಾಯಿ-ಮಗಳು ಆತ್ಮಹತ್ಯೆ: 19 ಮಂದಿ ವಿರುದ್ಧ ಎಫ್‌ಐಆರ್

Date:

Advertisements

ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ 19 ಮಂದಿ ವಿರುದ್ಧ ಮಂಡ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.

ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಯುವತಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಆತ್ಮಹತ್ಯೆಗೆ ಮಾರಸಿಂಗನಹಳ್ಳಿಯ ಹರಿಕೃಷ್ಣ ಮತ್ತು ಆತನ ಕುಟುಂಬಸ್ಥರೇ ಕಾರಣವೆಂದು ಆಕೆಯ ತಾಯಿ ಲಕ್ಷ್ಮಿ ಆರೋಪಿಸಿದ್ದರು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಪೊಲೀಸರು ತನಿಖೆ ನಡೆಸದೆ ನಿರ್ಲಕ್ಷ್ಯದಿಂದ ವರ್ತಿಸುತ್ತಿದ್ದಾರೆ ಎಂದು ಡೆತ್‌ನೋಟ್‌ ಬರೆದಿಟ್ಟು ಶುಕ್ರವಾರ ಲಕ್ಷ್ಮಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಸಾವಿನ ಬಳಿಕ, ಪೊಲೀಸರು 19 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

21 ವರ್ಷದ ಯುವತಿ ವಿಜಯಲಕ್ಷ್ಮಿ ಮತ್ತು ಮಾರಸಿಂಗನಹಳ್ಳಿಯ ಹರಿಕೃಷ್ಣ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದರೆ, ಹರಿಕೃಷ್ಣ ಪ್ರೀತಿಯ ಹೆಸರಿನಲ್ಲಿ ಆಕೆಯನ್ನು ಶೋಷಿಸಿ, ಮೋಸ ಮಾಡಿದ್ದ. ಆ ಕಾರಣದಿಂದಲೇ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಲಕ್ಷ್ಮಿ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

Advertisements

ಆದರೆ, ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ತಮ್ಮ ಮಗಳು ಸಾವನ್ನಪ್ಪಿ 20 ದಿನಗಳಾದರೂ ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ. ಆರೋಪಿಗಳ ವಿರುದ್ಧ ಎಫ್‌ಐಆರ್‌ ಕೂಡ ದಾಖಲಿಸಿಲ್ಲ. ಆರೋಪಿಯೊಂದಿಗೆ ಶಾಮೀಲಾಗಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ಹೋಗಿದ್ದಕ್ಕೆ ಗ್ರಾಮಸ್ಥರ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ ಎಂದು ಲಕ್ಷ್ಮಿ ತಮ್ಮ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ.

ತಮ್ಮ ಡೆತ್‌ನೋಟ್‌ನಲ್ಲಿ ಆರೋಪಿಗಳ ಹೆಸರನ್ನೂ ಉಲ್ಲೇಖಿಸಿದ್ದು, ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು. ಲಕ್ಷ್ಮಿ ಅವರ ಸಾವಿನ ಬಳಿಕ, ಗ್ರಾಮಸ್ಥರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದೀಗ, ಪೊಲೀಸರು ಹರಿಕೃಷ್ಣ, ಆತನ ಕುಟುಂಬಸ್ಥರು ಸೇರಿದಂತೆ 19 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X