ಮುಂಗಾರು ಚುರುಕು; ರಾಜ್ಯದ ಹಲವೆಡೆ ಮಳೆ ಆರಂಭ

Date:

Advertisements

ಬಿಪೊರ್‌ಜಾಯ್ ಚಂಡಮಾರುತದ ಪರಿಣಾಮದಿಂದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಇದೀಗ ಚುರುಕಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆ ಆರಂಭವಾಗಿದೆ.

ರಾಜ್ಯದ ಬಹುತೇಕ ಕಡೆ ಮುಂಗಾರು ಚುರುಕಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಭಾಗಗಳಲ್ಲಿ ಈ ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಗುಡುಗು ಮಿಂಚಿನ ಸಹಿತ ಉತ್ತಮ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮಂಗಳವಾರ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದ್ದು, ಜನ ಹೊರಗಡೆ ವಾಕಿಂಗ್‌ ಇತ್ಯಾದಿಗಳಿಗೆ ಬರಲು ಹಿಂಜರಿದರು. ಬೆಂಗಳೂರಿನಲ್ಲಿ ಮಲೆನಾಡಿನಂತಾಗಿದ್ದು, ತುಂತುರು ಮಳೆಯ ನಡುವೆ ಜನ ಓಡಾಡಿದರು. ಇಷ್ಟು ದಿನ ಸೆಕೆ, ಬಿಸಿಲಿನಿಂದ ಕಂಗೆಟ್ಟಿದ್ದ ನಗರವಾಸಿಗಳು ತುಂತುರು ಮಳೆಯಿಂದ ಮೈ ಕುಲುಕಿಸುವ ಚಳಿಯನ್ನು ಆನಂದಿಸಿದ್ದಾರೆ.

Advertisements

ಜೂನ್‌ ಮೂರನೇ ವಾರ ಮುಗಿಯುವ ಹಂತಕ್ಕೆ ಬಂದರೂ ಮಳೆ ಬಾರದ ಕಾರಣ ರೈತರು ಕಂಗಾಲಾಗಿದ್ದರು. ಕೃಷಿ ಭೂಮಿಯನ್ನು ಹದಮಾಡಿಕೊಂಡು ಬಿತ್ತನೆಗೆ ಕಾಯುತ್ತಿದ್ದ ರೈತರು ಕೊನೆಗೂ ಹರ್ಷ ವ್ಯಕ್ತಪಡಿಸುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ಬರದ ಭೀತಿಯಲ್ಲಿದ್ದ ರೈತರಿಗೆ ಮಳೆ ಸೂಚನೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯನ್ನು ನಿರೀಕ್ಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X