ಪಾಪ್‌ಕಾರ್ನ್ ಬಳಿಕ ಈಗ ಡೋನಟ್‌ಗೆ ‘ಜಿಎಸ್‌ಟಿಗರ’ ಕಾಟ ಶುರುವಾಗಿದೆ: ಕಾಂಗ್ರೆಸ್

Date:

Advertisements

ಈ ಹಿಂದೆ ಪಾಪ್‌ಕಾರ್ನ್ ಮೇಲೆ ವಿವಿಧ ರೀತಿಯ ಜಿಎಸ್‌ಟಿ ವಿಧಿಸಿದ ಕೇಂದ್ರ ಸರ್ಕಾರ ಇದೀಗ ಡೋನಟ್‌ಗೆ ಬೇರೆ ಬೇರೆ ರೀತಿಯ ಜಿಎಸ್‌ಟಿ ವಿಧಿಸಲು ಮುಂದಾಗಿದೆ. ಈ ವಿಭಿನ್ನ ಜಿಎಸ್‌ಟಿ ದರಗಳನ್ನು ಜಾರಿಗೆ ತಂದ ಕೇಂದ್ರ ಸರ್ಕಾರವನ್ನು ಶನಿವಾರ ಕಾಂಗ್ರೆಸ್ ಟೀಕಿಸಿದೆ. “ಪಾಪ್‌ಕಾರ್ನ್ ಬಳಿಕ ಈಗ ಡೋನಟ್‌ಗೆ ‘ಜಿಎಸ್‌ಟಿಗರ’ ಕಾಟ ಶುರುವಾಗಿದೆ” ಎಂದು ಹೇಳಿದೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಿಎಸ್‌ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಈಗ ಡೋನಟ್ ಜಿಎಸ್‌ಟಿಗರಿಂದಾಗಿ ಬಳಲುತ್ತಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪಾಪ್‌ಕಾರ್ನ್‌ ಮೇಲೆ ಮೂರು ರೀತಿಯ ಜಿಎಸ್‌ಟಿ; ಟ್ರೋಲ್ ಆದ ನಿರ್ಮಲಾ ಸೀತಾರಾಮನ್

Advertisements

“ಮ್ಯಾಡ್ ಓವರ್ ಡೋನಟ್ಸ್ (ಬೇಕರಿ) ತನ್ನ ಬೇಕರಿ ವಸ್ತುಗಳ ಮೇಲೆ 18% ತೆರಿಗೆ ಇದೆ. ಆದರೆ ಡೋನಟ್‌ಗಳ ಮೇಲೆ ಶೇಕಡ 5ರಷ್ಟು ತೆರಿಗೆ ಪಾವತಿಸಿದ್ದಾರೆ. ಅದಕ್ಕಾಗಿ ಈಗ 100 ಕೋಟಿ ರೂ. ತೆರಿಗೆ ನೋಟಿಸ್ ಎದುರಿಸುವಂತಾಗಿದೆ. ಸದ್ಯ ಈ ವಿಚಾರವು ಬಾಂಬೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಹಾಗೆಯೇ, “ವ್ಯಾಪಾರ ನಡೆಸುವುದು ಈ ಜಿಎಸ್‌ಟಿಯಿಂದಾಗಿ ಸುಲಭ” ಎಂದು ಜೈರಾಮ್ ರಮೇಶ್ ವ್ಯಂಗ್ಯವಾಡಿದ್ದಾರೆ. “ಇದಕ್ಕಾಗಿಯೇ ಜಿಎಸ್‌ಟಿ 2.0 ಅತೀ ತುರ್ತಾದ ನಿರ್ಧಾರ ಎಂದು ಹೇಳುವುದು” ಎಂದಿದ್ದಾರೆ.

ಪಾಪ್‌ಕಾರ್ನ್‌ಗೆ ಹೋಲಿಸಿದರೆ ದೇಶದಲ್ಲಿ ಡೋನಟ್‌ಗಳನ್ನು ಸೇವಿಸುವವರ ಸಂಖ್ಯೆ ಕಡಿಮೆ ಎನ್ನಬಹುದು. ಇಂದಿಗೂ ಡೋನಟ್‌ಗಳು ಶ್ರೀಮಂತರು ಮತ್ತು ಮಧ್ಯಮ ವರ್ಗದ ಕೆಲ ಜನರ ನಡುವೆ ಮಾತ್ರ ಪರಿಚಿತವಾಗಿದೆ.

ಸದ್ಯ ಡೋನಟ್‌ ಅನ್ನು ರೆಸ್ಟೋರೆಂಟ್‌ನಲ್ಲಿ ಮಾರಾಟ ಮಾಡುವ ಸಿಹಿ ತಿನಿಸು ಎಂದು ಪರಿಗಣಿಸಿ ಶೇಕಡ 5ರಷ್ಟು ಜಿಎಸ್‌ಟಿ ವಿಧಿಸುವುದೇ ಅಥವಾ ಬೇಕರಿ ತಿಂಡಿ ಎಂದು ಪರಿಗಣಿಸಿ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುವುದೇ ಎಂಬ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯ ಇದಕ್ಕೆ ಸಂಬಂಧಿಸಿದ ಅರ್ಜಿಯನ್ನು ಬಾಂಬ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಾಪ್‌ಕಾರ್ನ್‌ಗೂ ಮೂರು ರೀತಿಯ ಜಿಎಸ್‌ಟಿ ವಿಧಿಸಿರುವ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ರೋಲ್‌ಗೆ ಒಳಗಾಗಿದ್ದರು. ಜಿಎಸ್‌ಟಿ ಕೌನ್ಸಿಲ್ ಈ ಬಗ್ಗೆ ಸ್ಪಷ್ಟನೆ ನೀಡಿರುವುದನ್ನು ಕೂಡಾ ನೆಟ್ಟಿಗರು ಟ್ರೋಲ್ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕೂಡಾ ಕೇಂದ್ರ ಸರ್ಕಾರದ ಜಿಎಸ್‌ಟಿ ನೀತಿಯನ್ನು ವಿರೋಧಿಸಿತ್ತು.

‘ಸಕ್ಕರೆ ಮಿಠಾಯಿ’ ಎಂದು ವರ್ಗೀಕರಿಸಲಾದ ಕಾರಣ ಕ್ಯಾರಮೆಲೈಸ್ಡ್ ಪಾಪ್‌ಕಾರ್ನ್ ಮೇಲೆ ಸಾಲ್ಟೆಡ್ (ಉಪ್ಪು ಮಿಶ್ರಿತ) ಮತ್ತು ಸಾದಾ ಪಾಪ್‌ಕಾರ್ನ್‌ಗಿಂತ ವಿಭಿನ್ನವಾಗಿ ತೆರಿಗೆ ವಿಧಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದರು. ಇದರಿಂದಾಗಿ ಭಾರೀ ಟ್ರೋಲ್ ಆಗಿದ್ದರು. ಇದೀಗ ಡೋನಟ್ ಮೇಲಿನ ಜಿಎಸ್‌ಟಿ ವಿಚಾರವನ್ನು ಮುನ್ನಲೆಗೆ ತರುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X