ಬೆಂಗಳೂರು | ನಗರಕ್ಕೆ ತಂಪೆರೆದ ಮಳೆ; ವಿವಿಧೆಡೆ ಸಂಚಾರ ದಟ್ಟಣೆ

Date:

Advertisements

ಮುಂಗಾರು ಮಳೆಯಾಗದೆ ಕಂಗಾಲಾಗಿದ್ದ ರಾಜ್ಯದ ರೈತರ ಮೊಗದಲ್ಲಿ ಮಂಗಳವಾರ (ಇಂದು) ಮಂದಹಾಸ ಮೂಡಿದೆ. ರಾಜ್ಯಾದ್ಯಂತ ಬೆಳಗ್ಗೆ ಇಂದಲೇ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಿದೆ. ಬಿಸಿಲಿನ ಬೇಗೆಯಲ್ಲಿ ಬಸವಳಿದಿದ್ದ ನಗರದ ನಿವಾಸಿಗಳಿಗೆ ಮಳೆಯು ತಂಪು ನೀಡಿದೆ.

ನಗರದ ನಾನಾ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿದ್ದು, ಸಂಚಾರ ದಟ್ಟಣೆಯೂ ನಿರ್ಮಾಣವಾಗಿದೆ. ಮೆಜೆಸ್ಟಿಕ್, ಕಾರ್ಪೋರೇಷನ್ ವೃತ್ತ,ಶಾಂತಿನಗರ, ವಿಲ್ಸನ್‌ಗಾರ್ಡನ್, ಹೆಬ್ಬಾಳ, ಮೇಕ್ರಿ ಸರ್ಕಲ್‌ ಸೇರಿದಂತೆ ಹಲವಡೆ ವಾಹಸ ಸವಾರರು ‘ಟ್ರಾಫಿಕ್‌’ನಲ್ಲಿ ಸಿಲುಕಿಕೊಂಡು ಪರದಾಡಿದ್ದಾರೆ.

ಔಟರ್​​ ರಿಂಗ್​ ರೋಡ್, ಬಿಇಎಲ್ ವೃತ್ತ, ಕುವೆಂಪು ವೃತ್ತ, ಹೆಬ್ಬಾಳ ಬಳಿ ರಸ್ತೆಗಳು ಜಲಾವೃತವಾಗಿವೆ. ಲಿ ಮೆರಿಡಿಯನ್ ಅಂಡರ್‌ಪಾಸ್‌ನಲ್ಲಿ ನೀರು ತುಂಬಿಕೊಂಡಿದೆ. ಹಲವೆಡೆ ಬಿಬಿಎಂಪಿ ಮತ್ತು ಸಂಚಾರ ಪೊಲೀಸರು ರಸ್ತೆಯಿಂದ ಚರಂಡಿಗೆ ನೀರು ಸರಾಗವಾಗಿ ಹರಿಯುವಂತೆ ಮಾಡಿದ್ದು, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Advertisements

“ರಸ್ತೆಗಳಲ್ಲಿ ಎಚ್ಚರಿಕೆಯಿಂದ ಮತ್ತು ಸುರಕ್ಷಿತವಾಗಿ ವಾಹನ ಚಾಲನೆ ಮಾಡಿ. ದಯಮಾಡಿ ಸಹಕರಿಸಿ. ಇದು ನಿಮ್ಮ ಸುರಕ್ಷತೆಯ ವಿಷಯ!” ಎಂದು ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ನಿವಾಸಿಗಳು ತಮ್ಮ ದ್ವಿಚಕ್ರ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡಿ ಅಥವಾ ಓಡಿಸಿ ಮತ್ತು ಕಡಿಮೆ ಗೋಚರತೆಯ ಹೆಡ್‌ಲೈಟ್‌ಗಳನ್ನು ಬಳಸಿ ಎಂದು ಸದಾಶಿವನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X