ಬೀದರ್‌ | ಬಸವಕಲ್ಯಾಣದಲ್ಲಿ ಶರಣರ ಸಂದೇಶ ಫಲಕ ಅಳವಡಿಸಲು ಆಗ್ರಹ

Date:

Advertisements

ಬಸವಕಲ್ಯಾಣ ನಗರದ ಮುಖ್ಯರಸ್ತೆ ವಿಭಜಕ ಮಧ್ಯದಲ್ಲಿ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವತಿಯಿಂದ ಅಳವಡಿಸಲಾಗಿದ್ದ ಬಸವಾದಿ ಶರಣರ ಸಂದೇಶ ಫಲಕಗಳು ಹಾಳಾಗಿದ್ದು ಕೂಡಲೇ ಹೊಸ ಫಲಕಗಳನ್ನು ಅಳವಡಿಸಬೇಕೆಂದು ರಾಷ್ಟ್ರೀಯ ಬಸವ ದಳ ಹಾಗೂ ಬಸವ ಕೇಂದ್ರದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ಶನಿವಾರ ಬಸವಕಲ್ಯಾಣದಲ್ಲಿ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಗನ್ನಾಥ ರೆಡ್ಡಿಅವರಿಗೆ ಹಕ್ಕೊತ್ತಾಯಪತ್ರ ಸಲ್ಲಿಸಿದರು.

ʼಜಗತ್ತಿಗೆ ಮೊಟ್ಟಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಈ ಹಿಂದೆ ʼಬಸವ ಉತ್ಸವʼ ಸಂದರ್ಭದಲ್ಲಿ ಮುಖ್ಯರಸ್ತೆಯ ವಿಭಜಕ ಮಧ್ಯ ವಚನ ಸಂದೇಶ ಫಲಕಗಳು ಹಾಕಲಾಗಿತ್ತು. ಇದೀಗ ಬಹುತೇಕ ಫಲಕಗಳು ಹಾಳಾಗಿ ಓದಲು ಸಾಧ್ಯವಾಗುತ್ತಿಲ್ಲʼ ಎಂದರು.

Advertisements

ಶರಣರ ಕಾಯಕ ಭೂಮಿ ಬಸವಕಲ್ಯಾಣದಲ್ಲಿನ ಶರಣರ ಸ್ಮಾರಕ ವೀಕ್ಷಣೆಗೆ ನಿತ್ಯ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹಾಗಾಗಿ ಬಿಕೆಡಿಬಿ ವತಿಯಿಂದ ಉತ್ತಮ ಗುಣಮಟ್ಟದ ಶರಣರ ಸಂದೇಶ ಸಾರುವ ಫಲಕಗಳನ್ನು ಅಳವಡಿಸಿ ನಗರದ ಅಂದ ಹೆಚ್ಚಿಸಬೇಕು ಎಂದು ಬಸವಾನುಯಾಯಿಗಳ ಪರವಾಗಿ ಮನವಿ ಮಾಡುತ್ತೇವೆʼ ಎಂದರು.

ಈ ಸುದ್ದಿ ಓದಿದ್ದೀರಾ? ಔರಾದ್‌ ಸೀಮೆಯ ಕನ್ನಡ | ಹಂತಿ ಹೊಡಿಲಾಕ್‌ ನಮ್‌ ಎತ್ಗೊಳ್‌ ಖಾಲಿನೇ ಅವಾ!

ರಾಷ್ಟೀಯ ಬಸವ ದಳ ಬಸವಕಲ್ಯಾಣ ತಾಲ್ಲೂಕಾಧ್ಯಕ್ಷ ರವೀಂದ್ರ ಕೋಳಕೂರ, ಹುಲಸೂರ ತಾಲ್ಲೂಕು ಬಸವ ಕೇಂದ್ರ ಅಧ್ಯಕ್ಷ ಆಕಾಶ ಖಂಡಾಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X