ಜಾತಿ ದೌರ್ಜನ್ಯ | ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಮಾಡಿ ಸವರ್ಣಿಯರ ವಿಕೃತಿ

Date:

Advertisements

ವಿವಾಹಿತ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ದಲಿತ ವ್ಯಕ್ತಿಯನ್ನು ಥಳಿಸಿ, ಬೆತ್ತಲೆಗೊಳಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.ಸವರ್ಣೀಯರ ಗುಂಪೊಂದು ದಲಿತನನ್ನು ಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮರೆದಿದೆ.

ಗುಜರಾತ್‌ನ ಸಬರ್ ಕಾಂತ ಜಿಲ್ಲೆಯಲ್ಲಿ ವಡೋಲ್ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮಾರ್ಚ್‌ 11ರಂದು ಘಟನೆ ನಡೆದಿದ್ದು, ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಘಟನೆ ಬೆಳಕಿಗೆ ಬಂದಿದೆ. ವಿಡಿಯೋ ಆಧಾರಿಸಿ ಇದಾರ್ ಪೊಲೀಸ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಪ್ರಕರಣದ ಬಗ್ಗೆ ವಿವರಿಸಿರುವ ಇದಾರ್ ಪೊಲೀಸ್ ಇನ್ಸ್‌ಪೆಕ್ಟರ್ ಚೇತನ್ ರಾಥೋಡ್, “ಘಟನೆ ಸಂಬಂಧ 15 ಮಂದಿ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 9 ಮಂದಿಯನ್ನು ಬಂಧಿಸಿದ್ದೇವೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಸಂತ್ರಸ್ತ ದಲಿತ ವ್ಯಕ್ತಿ ನಿರ್ಮಾಣ ಕಾರ್ಮಿಕನಾಗಿದ್ದು, ಸವರ್ಣೀಯರ ವಿಚಾರದಲ್ಲಿ ಭಯಭೀತನಾಗಿದ್ದಾರೆ. ಆರಂಭದಲ್ಲಿ ತಾನು ಮೆಟ್ಟಿಲುಗಳಿಂದ ಜಾರಿ ಬಿದ್ದುದ್ದಾಗಿ ಸುಳ್ಳು ಹೇಳಿದ್ದರು. ಆದರೆ, ವಿಡಿಯೋ ವೈರಲ್ ಆದ ಬಳಿಕ, ಘಟನೆಯ ಹಿನ್ನೆಲೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನನ್ನು ಅವರ ಕೆಲಸದ ಸ್ಥಳಗಳಿಗೆ ಕರೆದುಕೊಂಡು ಹೋದಾಗ ಜಾರಿ ಬಿದ್ದೆನೆಂದು ಬರೆಸಿದ್ದಾನೆ. ಅಂತಹ ಒಂದು ಸ್ಥಳದಲ್ಲಿ ಅವನು ಆ ಮಹಿಳೆಯನ್ನು ಭೇಟಿಯಾದನು ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರೂ ಸಹ ವಿವಾಹಿತರಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮುಸ್ಲಿಂ ಸಮುದಾಯದ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷ: ನಿರ್ಲಕ್ಷ್ಯವೊಂದೆ ಪರಿಹಾರ

ದೌರ್ಜನ್ಯದ ವಿಡಿಯೋವನ್ನು ಗಮನಿಸಿದ ಪೊಲೀಸರು ಸಂತ್ರಸ್ತನನ್ನು ಸಂಪರ್ಕಿಸಿದ್ದು, ದೂರು ದಾಖಲಿಸುವಂತೆ ಮನವೊಲಿಸಿದ್ದಾರೆ. ಬಳಿಕ, ಸಂತ್ರಸ್ತ ದಲಿತ ದೂರು ನೀಡಿದ್ದಾರೆ. ದೂರಿನಲ್ಲಿ, ಸಂಜಯ್ ಈಶ್ವರ್ ಠಾಕೂರ್ ಪ್ರಮುಖ ಆರೋಪಿಯೆಂದು ಉಲ್ಲೇಖಿಸಿದ್ದಾರೆ. ಕಿಶನ್ ಸೆಂಧಾಜಿ ಠಾಕೂರ್, ಮನೋಜ್ ಅಲಿಯಾಸ್ ಮನಾಜಿ ಸೋಮಾಜಿ ಠಾಕೂರ್, ನರೇಶ್ ಈಶ್ವರ್ ಠಾಕೂರ್, ನುನೋ ಅಲಿಯಾಸ್ ಹರೇಶ್ ಠಾಕೂರ್, ಮಂಗಾಜಿ ಸೋಮಾಜಿ ಠಾಕೂರ್, ಅತುಲ್ಜಿ ವಿನಾಜಿ ಠಾಕೂರ್, ಅರುಣ್ ಬಾಲ್ಕೃಷ್ಣ ಬರೋಟ್, ಉಮೇಶ್ ಜಿತೇಂದ್ರ ಬರೋಟ್, ಜ್ಯೋತ್ಸ್ನಾ ಸಂಜಯ್ ಠಾಕೂರ್, ವಿಶಾಲ್ ಪೆಲಾಡ್ ಸುತಾರ್, ಚೇತನ್ ಈಶ್ವರ್ ನಯೀ ಎಂಬವರ ಹೆಸರನ್ನು ಉಲ್ಲೇಖಿಸಿದ್ದಾರೆ.

ಈ ಎಲ್ಲ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 137(2) (ಅಪಹರಣ), 189(2) (ಕಾನೂನುಬಾಹಿರ ಸಭೆ), 191(2) (ಗಲಭೆ), 190 (ಕಾನೂನುಬಾಹಿರ ಸಭೆಗೆ ಸಾಮೂಹಿಕ ಹೊಣೆಗಾರಿಕೆ), 310(2) (ದರೋಡೆ), 352 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಅವಮಾನ) ಮತ್ತು 351(3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X