ಅತ್ಯಾಚಾರ ಆರೋಪಿ ಮುರುಘಾಶ್ರೀ ಪೀಠತ್ಯಾಗಕ್ಕೆ ಮಾಜಿ ಸಚಿವ ಒತ್ತಾಯ

Date:

Advertisements

ಅಪ್ರಪ್ತಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಮುರುಘಾ ಮಠದ ಆರೋಪಿ ಮುರುಘಾ ಶಿವಮೂರ್ತಿ ಮಠದ ಪೀಠ ತ್ಯಾಗ ಮಾಡಬೇಕೆಂದು ಮಾಜಿ ಸಚಿವ ಎಚ್‌ ಏಕಾಂತಯ್ಯ ಒತ್ತಾಯಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸನ್ಯಾಸಿಗೂ – ಸಂಸಾರಿಗೂ ವ್ಯತ್ಯಾಸವಿದೆ. ಸನ್ಯಾಸಿಗಳು ವ್ಯಾಮೋಹ ಇಲ್ಲದ ಜೀವನ ನಡೆಸುತ್ತಿದ್ದಾರೆ” ಎಂದು ಹೇಳಿದರು.

“ಶಿವಮೂರ್ತಿ ಅವರು ಟ್ರಸ್ಟ್‌ ಅಧ್ಯಕ್ಷನಾದ ಮೇಲೆ ಸಬ್ ರಿಜಿಸ್ಟ್ರಾರ್ ಕಚೇರಿಯ ಮಾರ್ಗಸೂಚಿಗಿಂತ ಕಡಿಮೆ ಬೆಲೆಗೆ ಮಠದ ಆಸ್ತಿಗಳನ್ನು ಮಾರಾಟ ಮಾಡಿದ್ದಾರೆ. ಬೆಂಗಳೂರು ಬಳಿಯ ಸೂಲಿಕೆರೆ ಗ್ರಾಮದಲ್ಲಿ 7.18 ಎಕರೆ ಜಾಗವನ್ನು 79 ಲಕ್ಷ ರೂ.ಗೆ 2008ರಲ್ಲಿ ಮಾರಾಟ ಮಾಡಿದ್ದಾರೆ. ಅಲ್ಲಿನ ನೋಂದಾಣಾಧಿಕಾರಿ ಕಚೇರಿಯ ಮಾರ್ಗಸೂಚಿ ಪ್ರಕಾರ, ಆ ಆಸ್ತಿಯ ಬೆಲೆ 3.57 ಕೋಟಿ ರೂ. ಇದೆ. ಅಂತೆಯೇ, ಹಾವೇರಿಯಲ್ಲಿ 21.12 ಎಕರೆ ಜಮೀನನ್ನು 6 ಜನರಿಗೆ ಕಡಿಮೆ ಬೆಲೆ ಮಾರಾಟ ಮಾಡಿದ್ದಾರೆ. ಅಲ್ಲದೆ, ಚಿತ್ರದುರ್ಗದ ವಿವಿಧ ಆಸ್ತಿಯನ್ನು ಕೆಲವು ಸ್ವಾಮೀಜಿಗಳಿಗೆ ಮಾರಿದ್ದಾರೆ” ಎಂದು ದೂರಿದ್ದಾರೆ.

Advertisements

“ಮೆಡಿಕಲ್ ಕಾಲೇಜು, ಆಸ್ಪತ್ರೆ, ಮೂಲ ಸೌಕರ್ಯಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಮಠದ ಆಸ್ತಿ ಹಾಳಾಗಲು ನಾವು ಬಿಡುವುದಿಲ್ಲ. ಹೋರಾಟ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X