ತೀರ್ಥಹಳ್ಳಿ | ನಮಾಜ್ ವೇಳೆ ಕಳ್ಳತನ; ಆರೋಪಿಗಳ ಬಂಧನ

Date:

Advertisements

ನಮಾಜ್ ಮುಗಿಸಿಕೊಂಡು ಬರುವ ಹೊತ್ತಿಗೆ ಲಕ್ಷಾಂತರ ರೂ ಹಣದ ಸಮೇತ ಗೂಡ್ಸ್ ವಾಹನವನ್ನೇ ಮಂಗಮಾಯ ಮಾಡಿದ್ದ ಪ್ರಕರಣವನ್ನ ತೀರ್ಥಹಳ್ಳಿ ಪೊಲೀಸರು‌ ಬೇಧಿಸಿದ್ದಾರೆ.

ದಾವಣಗೆರೆ ಮೂಲದ ಸೈಯದ್‌ ಅಬ್ದುಲ್ಲಾ(45), ನವೀದ್‌ ಅಹಮದ್‌(40) ಹಾಗೂ ಜಾವೀದ್(42)‌ ಬಂಧಿತ ಆರೋಪಿಗಳು.

ಮಾ.14ರಂದು ಬೆಳಗ್ಗೆ ಹೊನ್ನಾಳಿ ಬೊಂಬು ಬಜಾರ್‌ನ ಮಹಮದ್ ಇರ್ಷಾದ್, ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ₹29,00,000ಗಳನ್ನು ತೆಗೆದುಕೊಂಡು, ಸ್ಕ್ರಾಪ್ ವ್ಯವಹಾರದ ಸಂಬಂಧ ಹೊನ್ನಾಳಿಯಿಂದ ಮಂಗಳೂರಿಗೆ ಹೊರಟಿದ್ದರು.

Advertisements

ಮಾರ್ಗ ಮಧ್ಯೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಂಜದಕಟ್ಟೆ ಮಸೀದಿಯ ಹತ್ತಿರ ನಮಾಜ್ ಮಾಡುವ ಸಲುವಾಗಿ ವಾಹನವನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ, ಹಣವಿದ್ದ ಬ್ಯಾಗ್ ಅನ್ನು ವಾಹನದಲ್ಲಿಯೇ ಇಟ್ಟು ಮಸೀದಿಗೆ ನಮಾಜ್ ಮಾಡಲು ಹೋಗಿ ವಾಪಸ್ಸು ಬಂದು ನೋಡಿದಾಗ, ವಾಹನವು ಸ್ಥಳದಲ್ಲಿ ಇರಲಿಲ್ಲ. ಹಣ ಹಾಗೂ ಗೂಡ್ಸ್ ವಾಹನವನ್ನು ಕಳುವ ಮಾಡಲಾಗಿತ್ತು.

ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಕಳುವಾದ ನಗದು ಹಣ, ವಾಹನ ಮತ್ತು ಆರೋಪಿಗಳ ಪತ್ತೆಗಾಗಿ ಎಸ್‌ಪಿ ಮಿಥುನ್ ಕುಮಾರ್ ಜಿ. ಕೆ, ಅಡಿಷನಲ್ ಎಸ್‌ಪಿಗಳಾದ ಅನಿಲ್ ಕುಮಾರ್ ಭೂಮರಡ್ಡಿ, ಕಾರಿಯಪ್ಪ ಎ. ಜಿರವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ಇದನ್ನೂ ಓದಿ: ತೀರ್ಥಹಳ್ಳಿ | 15ನೇ ಮೈಲಿಗಲ್ಲು ಬಳಿ ಅಪಘಾತ; ಯುವಕರ ಕಾಲು ಮುರಿತ

ತನಿಖಾ ತಂಡವು ಹೊನ್ನಾಳಿ ಪೊಲೀಸ್ ಠಾಣೆಯ ಪಿಐ ಸುನೀಲ್ ಕುಮಾರ ಹೆಚ್, ಎಎಸ್ಐ ಹರೀಶ್ ಮತ್ತು ಸಿಬ್ಬಂದಿಗಳಾದ ಸಿ.ಹೆಚ್.ಸಿ ಜಗದೀಶ, ಹೇಮಾನಾಯ್ಕ್, ಸುರೇಶ್ ನಾಯ್ಕ್ ಮತ್ತು ರಾಜಶೇಖರ್ ರವರ ಸಹಕಾರದೊಂದಿಗೆ ಆಪರೇಷನ್ ನಡೆಸಿತ್ತು. ಆರೋಪಿತರಿಂದ 29 ಲಕ್ಷ ನಗದು ಹಾಗೂ ಅಂದಾಜು ಮೌಲ್ಯ ₹10,00,000ಗಳ ವಾಹನ ಮತ್ತು ಕೃತ್ಯಕ್ಕೆ ಬಳಸಿದ ‌ಅಂದಾಜು ಮೌಲ್ಯ ₹6,00,000 ಟೊಯೋಟಾ ಇಟಿಯೋಸ್ ಕಾರು ಸೇರಿ ಒಟ್ಟು ₹45,00,000ಗಳ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X