ಹಾವೇರಿ | ರೈತರ ದವಸ-ಧಾನ್ಯ ಕದಿಯುತ್ತಿದ್ದ ಕಳ್ಳರ ಬಂಧನ

Date:

Advertisements

ರೈತರು ಬೆಳೆದ ದವಸ-ಧಾನ್ಯ ಕದ್ದು ಪರಾರಿಯಾಗುತ್ತಿದ್ದ ಐವರು ಕಳ್ಳರನ್ನು ಹಾವೇರಿಯ ಸವಣೂರು ಪೊಲೀಸರು ಬಂಧಿಸಿದ್ದಾರೆ. ದುರಗಪ್ಪ ಕೊರವರ, ಗಂಗಾಧರ ಕೊಕನೂರ, ಮಾಂತೇಶ ಗದಗ, ಅಮೀತ ಗೋಸಾವಿ ಹಾಗೂ ಅಭಿಷೇಕ ನರೇಗಲ್ ಬಂಧಿತ ಕಳ್ಳರು.

ಬಂಧಿತರಿಂದ 10.27 ಲಕ್ಷ ಮೌಲ್ಯದ ಜೋಳ, ಗೋವಿನಜೋಳ, ಸಾವಿ, ಗೋದಿ, ಕಡ್ಲಿ ಸೇರಿದಂತೆ ವಿವಿಧ ಧಾನ್ಯಗಳು ಹಾಗೂ ಕಳ್ಳತನಕ್ಕೆ ಬಳಸಿದ ಒಂದು ಬೊಲೆರೋ, ಒಂದು ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯ ರೈತರು ಬೆಳೆದ ಬೆಳೆಗಳನ್ನು ಕದ್ದು ಪರಾರಿ ಆಗುತ್ತಿದ್ದರು. ಮಾ.8 ರಂದು ಕಳ್ಳರು ಸವಣೂರು ತಾಲೂಕಿನ ತೆವರಮೆಳ್ಳಳ್ಳಿ ಗ್ರಾಮದ ರೈತ ಶಂಕ್ರಪ್ಪ ದೊಡ್ಡಮನಿ ಎಂಬುವರಿಗೆ ಸೇರಿದ ದವಸ ಧಾನ್ಯಗಳನ್ನು ಕಳ್ಳತನ ಮಾಡಿದ್ದರು. ಬಳಿಕ ಶಂಕ್ರಪ್ಪ ಈ ಕುರಿತು ಸವಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಎಸ್‌ಪಿ ಅಂಶುಕುಮಾರ ಆರೋಪಿಗಳ ಪತ್ತೆಗಾಗಿ ಸವಣೂರು ಸಿಪಿಐ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು‌.

Advertisements

ಇದನ್ನೂ ಓದಿ: ಹಾವೇರಿ | ನಾಡು, ನುಡಿಗಾಗಿ ಹೋರಾಡಿದ ಧೀಮಂತ ವ್ಯಕ್ತಿತ್ವದ ಗಟ್ಟಿ ಧ್ವನಿ ಡಾ. ಪಾಟೀಲ್ ಪುಟ್ಟಪ್ಪ: ಸಾಹಿತಿ ಸಂಕಮ್ಮ ಸಂಕಣ್ಣವರ

ಈ ಕಳ್ಳತನ ಪ್ರಕರಣ‌ ಪತ್ತೆಯಿಂದ ಒಟ್ಟು ಶಿಗ್ಗಾಂವಿ, ಬಂಕಾಪುರ, ಹುಲಗೂರು ಹಾಗೂ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಒಟ್ಟು ಒಂಬತ್ತು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಮತ್ತು ಅವರ ಪರವಾಗಿ ವಕಾಲತ್ತು ನಡೆಸಬಾರದು ಎಂದು ರೈತ ಸಂಘದ ಮುಖಂಡರು ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X