ಯಾದಗಿರಿ | ಏ.15ರವರೆಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ

Date:

Advertisements

ನಾರಾಣಪುರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಾಲುವೆಗಳಿಗೆ ಏಪ್ರಿಲ್‌ 15ರವರೆಗೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ ಆಗ್ರಹಿಸಿವೆ.

ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ರೈತ ಸಂಘ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಲಬಾವಿ ಮಾತನಾಡಿ, “ಬಸವಸಾಗರ ಜಲಾಶಯ ಅಣೆಕಟ್ಟಿನ ಎಡದಂಡೆ ಕಾಲುವೆಯ ವ್ಯಾಪ್ತಿಗೆ ಬರುವ ರೈತಾಪಿ ವರ್ಗದವರು ಡ್ಯಾಂನಲ್ಲಿ ನೀರು ಸಂಗ್ರಹಗೊಂಡಿರುವ ಖುಷಿಯಲ್ಲಿ ಹಿಂಗಾರು ಬೆಳೆಗೆ ಬಿತ್ತನೆ ಮಾಡಿರುತ್ತಾರೆ. ಇದೀಗ ಮಾ.14ರಂದು ಸಲಹಾ ಸಮಿತಿ ಸಭೆಯಲ್ಲಿ ವಾರ ಬಂದಿ ಪದ್ಧತಿಯನ್ನು ಅನುಸರಿಸಿ ಏಪ್ರಿಲ್ 06 ರವರೆಗೆ ಮಾತ್ರ ನೀರು ಹರಿಸಲು ತೀರ್ಮಾನಿಸಲಾಗಿದೆ”

“ಆದರೆ ಇದು ಅವೈಜ್ಞಾನಿಕವಾಗಿದ್ದು, ಹಿಂಗಾರು ಬಿತ್ತನೆ ಮಾಡಿದ ಬೆಳೆಗಳಿಗೆ ವಾರ ಬಂದಿ ಮಾಡದೆ ನಿರಂತರವಾಗಿ ಏಪ್ರಿಲ್.15 ರವರೆಗೆ ನೀರು ಬಿಟ್ಟರೆ ಮಾತ್ರ ರೈತರು ಬೆಳೆಗಳು ಕೈಗೆ ಸೇರುತ್ತವೆ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಎರಡು ಮೂರು ಬಾರಿ ಸಂಘಟನೆ ವತಿಯಿಂದ ಮನವಿ ಪತ್ರ ಕೊಟ್ಟರೂ ಯಾವುದೇ ಕ್ರಮ ಜರುಗಿಸಿದೆ ತಮ್ಮ ಇಚ್ಛೆಯಂತೆ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ. ಕೂಡಲೇ ನಿರ್ಧಾರ ಕೈಬಿಟ್ಟು ಕಾಲುವೆಗೆ ನೀರು ಹರಿಸಬೇಕು” ಎಂದು ಒತ್ತಾಯಿಸಿದರು.

Advertisements

“ಒಂದು ವೇಳೆ ನೀರು ಬಿಡದೆ ಹೋದಲ್ಲಿ ಮುಂದೆ ರೈತರ ಹಾನಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಮತ್ತು ರೈತ ಈ ಬೆಳೆಗೆ ಮಾಡಿದ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯಾದಗಿರಿ | ಮಾರಕಸ್ತ್ರಗಳಿಂದ ಹಲ್ಲೆ; ದಲಿತ ಮುಖಂಡನ ಭೀಕರ ಕೊಲೆ

ಈ ವೇಳೆ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X