ಗುಬ್ಬಿ | ಕಿಡಿಗೇಡಿಗಳಿಂದ ಸುರಿಗೇನಹಳ್ಳಿ ಕಾಡಿಗೆ ಬೆಂಕಿ : ಕಂಗಾಲಾದ ಮರಗಿಡಗಳಲ್ಲಿನ ಪಕ್ಷಿ ಸಂಕುಲ

Date:

Advertisements

ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮರಗಿಡಗಳು ಹೊತ್ತಿ ಉರಿದು ಪಕ್ಷಿ ಸಂಕುಲ ಕಂಗಾಲಾದ ಘಟನೆ ಭಾನುವಾರ ಸಂಜೆ ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಸುರಿಗೇನಹಳ್ಳಿ ಗುಡ್ಡ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಬೇಸಿಗೆ ಶುರುವಾದ ನಂತರದ ದಿನಗಳಲ್ಲಿ ಇದೇ ಅರಣ್ಯ ಪ್ರದೇಶಕ್ಕೆ ಮೂರು ಬಾರಿ ಬೆಂಕಿ ಸಂಭವಿಸಿದ್ದು ಯಾವುದೇ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಸುಮಾರು 100 ಎಕರೆ ಅರಣ್ಯ ಪ್ರದೇಶ ಹೊಂದಿರುವ ಸುರಿಗೇನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಗುಡ್ಡದ ರಂಗನಾಥಸ್ವಾಮಿ ದೇವಾಲಯ ಬೆಟ್ಟದ ತಪ್ಪಲಿನಲ್ಲಿರುವುದು ಒಂದೆಡೆಯಾದರೆ ಸುಂದರವಾದ ಹಸಿರು ವನಸಿರಿಯ ಜೊತೆಗೆ ಈ ದೇವಾಲಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿದೆ.

1001182528

ಪ್ರಕೃತಿ ತಪ್ಪಲಿನ ಅರಣ್ಯ ಪ್ರದೇಶದ ಈ ಗುಡ್ಡ ಉಳಿಸುವ ಕೆಲಸ ಮಾಡಬೇಕಿದೆ. ಸಾವಿರಾರು ಪಕ್ಷಿ ಸಂಕುಲ ಬೀಡು ಬಿಟ್ಟ ಅರಣ್ಯದಲ್ಲಿ ಕಂಡ ಬೆಂಕಿ ಹಸಿ ಮರಗಿಡಗಳನ್ನು ಆಹುತಿ ಪಡೆದಿದೆ. ಗೂಡು ಕಟ್ಟಿ ತನ್ನ ಮರಿಗಳೊಟ್ಟಿಗೆ ಇದ್ದ ಹಕ್ಕಿಗಳ ಆಕ್ರಂದನ ಕೇಳುವರ್ಯಾರು ಎಂಬಂತೆ ಕಂಡು ಬಂತು. ಪ್ರವಾಸಿಗರನ್ನು ಸೆಳೆಯುವ ಅರಣ್ಯ ಗುಡ್ಡ ಉಳಿಸುವ ಕೆಲಸ ಅರಣ್ಯ ಇಲಾಖೆ ಮಾಡದಿರುವುದು ಪರಿಸರ ಪ್ರೇಮಿಗಳಲ್ಲಿ ಬೇಸರ ಮೂಡಿಸಿದೆ.

Advertisements
1001182532

ಕಳೆದ 15 ದಿನಗಳ ಹಿಂದೆಯಷ್ಟೇ ಇದೇ ಅರಣ್ಯ ಪ್ರದೇಶದಲ್ಲಿರುವ ಗುಡ್ಡದ ರಂಗನಾಥಸ್ವಾಮಿ ದೇವಾಲಯಕ್ಕೆ ಕನ್ನ ಹಾಕಿದ್ದ ಘಟನೆ ಮೆರೆಯುವ ಮುನ್ನವೇ
ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿರುವುದು ಬೇಸರ ತಂದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿ ಬೆಂಕಿ ನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X