ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಕೆ: ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

Date:

Advertisements

ಮಹಿಳೆಯ ಒಪ್ಪಿಗೆ ಇಲ್ಲದೆಯೇ ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಸುವುದು ‘ವಾಣಿಜ್ಯ ದೌರ್ಜನ್ಯ’ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಸಾಮಾಜಿಕ ಮಾಧ್ಯಮ ಯುಗದಲ್ಲಿ ಇದೊಂದು ಗಂಭೀರ ವಿಷಯವಾಗಿದೆ ಎಂದು ಕೂಡಾ ಹೈಕೋರ್ಟ್ ಹೇಳಿದೆ.

ನಮೃತಾ ಅಂಕುಶ್ ಕವಾಲೆ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜಿ ಎಸ್ ಕುಲಕರ್ಣಿ ಮತ್ತು ಅದ್ವೈತ್ ಸೇಥ್‌ನ ಅವರ ವಿಭಾಗೀಯ ಪೀಠವು ಇಂದು ನಡೆಸಿದೆ. ಹಾಗೆಯೇ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ಕರ್ನಾಟಕ ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳಿಗೆ ನೋಟಿಸ್ ನೀಡಿದೆ. ಕಾಂಗ್ರೆಸ್ ಮತ್ತು ಯುಎಸ್‌ ಮೂಲಕ ಸಂಸ್ಥೆಗೂ ಬಾಂಬೆ ಹೈಕೋರ್ಟ್ ನೋಟಿಸ್ ನೀಡಿದೆ.

ಇದನ್ನು ಓದಿದ್ದೀರಾ? ಗುಟ್ಕಾ ಜಾಹೀರಾತು | ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

Advertisements

ಪರಿಚಯಸ್ಥ ಛಾಯಾಗ್ರಹಕರಾದ ತುಕಾರಾಂ ಕರ್ವೆ ತನ್ನ ಚಿತ್ರವನ್ನು ಕ್ಲಿಕ್ಕಿಸಿದ್ದು, ತನ್ನ ಅನುಮತಿಯಿಲ್ಲದೆಯೇ ಶಟರ್‌ಸ್ಟಾಕ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಅರ್ಜಿದಾರರಾದ ನಮೃತಾ ಆರೋಪಿಸಿದ್ದಾರೆ.

ಈ ಚಿತ್ರವನ್ನು ಕಾನೂನುಬಾಹಿರವಾಗಿ ನಾಲ್ಕು ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಜಾಹೀರಾತಿನಲ್ಲಿ ಬಳಸಿದೆ. ಕೆಲವು ಖಾಸಗಿ ಸಂಸ್ಥೆಗಳು ಕೂಡಾ ಜಾಹೀರಾತು ಮತ್ತು ಡಿಸ್‌ಪ್ಲೇ ಬೋರ್ಡ್‌ಗಳಲ್ಲಿ ಬಳಸಿದೆ ಎಂದು ಆರೋಪಿಸಲಾಗಿದೆ.

“ಅರ್ಜಿಯಲ್ಲಿ ಎತ್ತಲಾಗಿರುವ ವಿಚಾರವು ಅತೀ ಗಂಭೀರವಾದ್ದದ್ದು. ಇಂದಿನ ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮ ಯುಗದಲ್ಲಿ ಇದು ಗಂಭೀರವಾದುದ್ದು. ಇದು ಛಾಯಾಗ್ರಾಹಕ ಮಾಡಿರುವ ವಾಣಿಜ್ಯ ದೌರ್ಜನ್ಯವಾಗಿದೆ” ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಇದನ್ನು ಓದಿದ್ದೀರಾ? 25 ನಿಮಿಷ ಜಾಹೀರಾತು: ಬೆಂಗಳೂರಿನ ವ್ಯಕ್ತಿಯ ಸಮಯ ಪೋಲು ಮಾಡಿದ ಪಿವಿಆರ್‌ಗೆ 1.65 ಲಕ್ಷ ರೂ. ದಂಡ

ಇನ್ನು ಮಹಿಳೆಗೆ ಯಾವುದೇ ಮಾಹಿತಿ ನೀಡದೆಯೇ ಚಿತ್ರವನ್ನು ಶಟರ್‌ಸ್ಟಾಕ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಒಡಿಶಾ ರಾಜ್ಯ ಸರ್ಕಾರಗಳು, ತೆಲಂಗಾಣ ಕಾಂಗ್ರೆಸ್ ಮತ್ತು ಶಟರ್‌ಸ್ಟಾಕ್ ವೆಬ್‌ಸೈಟ್ ನಿರ್ವಹಣೆ ಮಾಡುವ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ನೀಡಿದೆ.

ನೋಟಿಸ್‌ ಪಡೆದ ಎಲ್ಲ ಸಂಸ್ಥೆಗಳು ಅಥವಾ ಸರ್ಕಾರಗಳು ಅಫಿಡವಿಟ್ ಸಲ್ಲಿಸುವಂತೆ ಹೈಕೋರ್ಟ್ ಆದೇಶಿಸಿದೆ. ಹಾಗೆಯೇ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X