ಕಲಬುರಗಿ | ಲಾರಿ ಹಾಯ್ದು 5 ವರ್ಷದ ಬಾಲಕ ಸಾವು; ಸಿಮೆಂಟ್‌ ಕಾರ್ಖಾನೆ ವಿರುದ್ಧ ಪ್ರತಿಭಟನೆ

Date:

Advertisements

ದಾಟುತ್ತಿದ್ದ ವೇಳೆ ಲಾರಿ ಹಾಯ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸೇಡಂ ತಾಲ್ಲೂಕಿನ ಮಳಖೇಡದ ರಾಜಶ್ರೀ ಸಿಮೆಂಟ್ ಕಂಪನಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ ಅಯ್ಯಪ್ಪ (5) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಕಂಪನಿಗೆ ಬರುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಿ ಕೊಡುವಂತೆ ಒತ್ತಾಯಿಸಿ ಬಾಲಕನ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಾಲಕನ ಶವವನ್ನು ರಾಜಶ್ರೀ ಸಿಮೆಂಟ್ ಕಂಪನಿಯ ಮುಖ್ಯದ್ವಾರದ ಎದುರು ಇಟ್ಟು ಪ್ರತಿಭಟಿಸಿದರು.

Advertisements

ʼರಾಜಶ್ರೀ ಸಿಮೆಂಟ್ ಕಾರ್ಖಾನೆ ವಿರುದ್ಧ ಪ್ರಕರಣ ದಾಖಲಿಸಿ 40 ಲಕ್ಷ ರೂ. ಪರಿಹಾರ ನೀಡಬೇಕು. ಮೃತರ ಕುಟುಂಬಸ್ಥರಿಗೆ ಕಾರ್ಖಾನೆಯಲ್ಲಿ ಉದ್ಯೋಗ ನೀಡಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರೂ ಕಾರ್ಖಾನೆ ಆಡಳಿತ ಮಂಡಳಿ ಮೌನ ವಹಿಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆ ಮುಖ್ಯ ದ್ವಾರದ ಬಳಿ ಸುಮಾರು ವರ್ಷಗಳಿಂದ ರಸ್ತೆ ಹದಗೆಟ್ಟು ಸಂಪೂರ್ಣ ಹಾಳಾಗಿದೆ. ಇದರಿಂದ ಅವಘಡ ಸಂಭವಿಸಿ ಇಲ್ಲಿಯವರೆಗೆ ಮೂರ್ನಾಲ್ಕು ಜೀವ ಹೋಗಿವೆʼ ಎಂದು ಮಳಖೇಡ ಗ್ರಾಪಂ ಸದಸ್ಯ ಉಮೇಶ್ ಪಾಂಡುಸಿಂಗ್ ಚೌವ್ಹಾಣ್ ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕದನ ವಿರಾಮ ಉಲ್ಲಂಘಿಸಿ ಗಾಜಾ ಮೇಲೆ ಇಸ್ರೇಲ್ ವ್ಯಾಪಕ ದಾಳಿ: ಕನಿಷ್ಠ 200 ಸಾವು

ಈ ಸಂದರ್ಭದಲ್ಲಿ ದಲಿತ ಸೇನೆ ಮುಖಂಡ ಮೈಲಾರಿ, ಅಂಬೇಡ್ಕರ್ ಸೇವ ಸಮಿತಿ ಮುಖಂಡ, ಶಂಭುಲಿಂಗ ನಾಟೇಕರ್‌ ಸೇರಿದಂತೆ ಮೃತ ಬಾಲಕನ ಪೋಷಕರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X