ವರದಕ್ಷಿಣೆ ತರುವಂತೆ ಸೊಸೆಯನ್ನು ಮನೆಯಿಂದ ಹೊರಹಾಕಿದ ಗಂಡನ ಮನೆಯವರು: ವೀಡಿಯೋ ವೈರಲ್

Date:

Advertisements

ಉತ್ತರ ಪ್ರದೇಶದ ಜಲಾಲ್‌ಪುರದಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಹಿಳೆಯೊಬ್ಬರನ್ನು ಬಲವಂತವಾಗಿ ಪತಿ ಮನೆಯಿಂದ ಹೊರಹಾಕುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆಯನ್ನು ರಂಜನಾ ಯಾದವ್ ಎಂದು ಗುರುತಿಸಲಾಗಿದೆ. ರಂಜನಾಗೆ ಕಳೆದ ಮಾರ್ಚ್‌ನಲ್ಲಿ ಅಂಬೇಡ್ಕರ್ ನಗರದ ನಿವಾಸಿ ರಮೇಶ್ ಕುಮಾರ್ ಯಾದವ್ ಜೊತೆ ವಿವಾಹವಾಗಿತ್ತು. ವರದಿಗಳ ಪ್ರಕಾರ, ವಿವಾಹದ ನಂತರ ಪತಿಯ ಮನೆಗೆ ತೆರಳುವಾಗ ರಂಜನಾ ವರದಕ್ಷಿಣೆಯಾಗಿ ಚಿನ್ನಾಭರಣ, ಫ್ರಿಜ್, ಕೂಲರ್, ಬೆಡ್ ಕೊಂಡೊಯ್ದಿದ್ದರು. ಆದರೆ, ಆಕೆಯ ಪತಿ ಮತ್ತು ಕುಟುಂಬಸ್ಥರು ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸಿದರು. ಆಕೆಯ ಬಳಿಯಿದ್ದ ಚಿನ್ನಾಭರಣವನ್ನು ಕಸಿದುಕೊಂಡರು.

ಕೊನೆಗೆ 5 ಲಕ್ಷ ರೂ.ತರುವಂತೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದರು. ಈ ಕುರಿತ ವೀಡಿಯೊ ಕೂಡ ಚಿತ್ರೀಕರಿಸಿ ವೈರಲ್ ಮಾಡಲಾಯಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಬಿಜೆಪಿ ವಿರೋಧವೇ ಅಸಾಂವಿಧಾನಿಕ

ವೈರಲ್ ವೀಡಿಯೊದಲ್ಲಿ ಪತಿ ಮನೆಯ ಬಾಗಿಲ ಬಳಿ ನಿಂತುಕೊಂಡಿದ್ದ ರಂಜನಾ ಅವರನ್ನು ಬಲವಂತವಾಗಿ ಹೊರ ಹಾಕುವುದು ಸೆರೆಯಾಗಿದೆ. ಪತಿ ರಮೇಶ್ ಕುಮಾರ್ ಮತ್ತು ಕುಟುಂಬಸ್ಥರಾದ ಶ್ರೀನಾಥ್ ಮತ್ತು ರಕ್ಷಾರಾಮ್ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡಿದರು ಎಂದು ರಂಜನಾ ಆರೋಪಿಸಿದ್ದಾರೆ.

ಈ ಕುರಿತು ಜಲಾಲ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಳ್ಳುವುದಾಗಿ ಎಸ್ಎಚ್ಒ ಜೈ ಪ್ರಕಾಶ್ ಮಾಧ್ಯಮಗಳಿಗೆ ತಿಳಿಸಿದರು.

https://twitter.com/bstvlive/status/1901524826705322332
https://kn.wikipedia.org/wiki/%E0%B2%89%E0%B2%A4%E0%B3%8D%E0%B2%A4%E0%B2%B0_%E0%B2%AA%E0%B3%8D%E0%B2%B0%E0%B2%A6%E0%B3%87%E0%B2%B6
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X