ವಿಜಯಪುರ | ಸಮಗ್ರ ಬೇಸಾಯ ಪದ್ಧತಿ ಅನುಸರಿಸಿ ಸ್ವಾವಲಂಬಿಗಳಾಗಿ: ಡಾ. ರವೀಂದ್ರ ಬೆಳ್ಳಿ ಸಲಹೆ

Date:

Advertisements

ರೈತರು ಸ್ಟಾಲಬಂಬಿ ಬದುಕು ಸಾಗಿಸಲು ಸಮಗ್ರ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಲಹೆ ನೀಡಿದರು.

ವಿಜಯಪುರ ತಾಲೂಕಿನ ಉಕಮನಾಳ ಗ್ರಾಮದ ಅಂಬೇಡ್ಕರ್ ಭವನದಲ್ಲಿ ರಾಷ್ಟೀಯ ಕೃಷಿ ಕೀಟ ಸಂಪನ್ಮೋಲ ಬ್ಯುರೋ ಬೆಂಗಳೂರು ಹಾಗೂ ಅಖಿಲ ಭಾರತ ಸಮನ್ವಿತ ಒಣ ಬೇಸಾಯ ಸಂಶೋಧನೆ ಯೋಜನೆ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಅಶೋಕ ಎಸ್. ಸಜ್ಜನ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಜಿಲ್ಲೆಯ ಪರಿಶಿಷ್ಟ ಜಾತಿಯ ರೈತರ ಸಬಲೀಕರಣಕ್ಕಾಗಿ ʼಒಣ ಬೇಸಾಯದ ತಾಂತ್ರಿಕತೆಗಳು’ ಕುರಿತು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೃಷಿ ಮಹಾವಿದ್ಯಾಲಯದ ಡೀನ್ ಮಾತನಾಡಿ, “ರೈತರು ಇಲಾಖೆಗಳಿಂದ ಸೌಲಭ್ಯ ಹಾಗೂ ಸಂಬಂಧಪಟ್ಟ ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಬೇಸಾಯ ಮಾಡಬೇಕು. ಸುಸ್ಥಿರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು, ಸಾವಯವ ಕೃಷಿಯತ್ತ ಹೆಚ್ಚಿನ ಒಲವನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಕೃಷಿಯಲ್ಲೂ ಅಭಿವೃದ್ಧಿ ಕಾಣಲು ಸಾಧು” ಎಂದರು.

Advertisements

ವಿಜ್ಞಾನಿ ಡಾ.ಮಿಲಿಂದ್ ಪೋತದಾರ ಮಾತನಾಡಿ, “ತರಬೇತಿ ಕೃಷಿ ಕೀಟ ಸಂಪನ್ಮೂಲ ಬ್ಯೂರೋ, ಯೋಜನೆಯಡಿಯಲ್ಲಿ ರೈತರಿಗೆ ವಿವಿಧ ಪರಿಕರ ವಿತರಿಸಲಾಗುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. 2.20 ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳಬೇಕೆಂದು” ಸಲಹೆ ನೀಡಿದರು.

WhatsApp Image 2025 03 18 at 10.56.26 AM 1

ಅಧ್ಯಕ್ಷತೆ ವಹಿಸಿದ್ದ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಬಿ.ಜಗ್ಗಿನವರ ಮಾತನಾಡಿ, “ಸಣ್ಣ ಅತೀ ಸಣ್ಣ ರೈತರಿಗೆ ವಿಶೇಷವಾಗಿ ಪರಿಶಿಷ್ಟ ಜಾತಿ ರೈತರಿಗೆ ಪರಿಕರ ವಿತರಣೆ ಮೂಲಕ ಆರ್ಥಿಕ ಸಬಬಲೀಕರಣ ಮಾಡುವ ಜೊತೆಗೆ ಮುಂಬರುವ ದಿನಗಳಲ್ಲಿ ಅವರನ್ನು ಉದ್ಯಮಶೀಲರನ್ನಾಗಿಸುವ ಗುರಿ ಹೊಂದಲಾಗಿದೆ” ಎಂದರು.

ಆಯ್ದ ಫಲಾನುಭವಿ ರೈತರಿಗೆ ಎರೆಹುಳು ಗೊಬ್ಬರ, ಸೈಕಲ್ ವೀಡರ್, ಹಣ್ಣಿನ ಸಸಿಗಳು, ತರಕಾರಿ ಕಿಟ್ಸ್, ಕೃಷಿ ಕೈಪಿಡಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪೋತದಾರ; ಒಣ ಬೇಸಾಯದಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆ, ಡಾ. ಎಸ್. ಬಿ. ಪಾಟೀಲ; ಹವಾಮಾನ ಸ್ಥಿತಿಸ್ಥಾಪಕತ್ವಕ್ಕಾಗಿ ಸಮಗ್ರ ಕೃಷಿ ಪದ್ದತಿ, ಡಾ.ಸವಿತಾ ಬಿ; ಒಣ ಬೇಸಾಯದಲ್ಲಿ ಮಣ್ಣಿನ ಆರೋಗ್ಯ, ಡಾ.ಜಿ.ಎಸ್.ಯಡಹಳ್ಳಿ; ಹವಾಮಾನ ಆಧಾರಿತ ಕೃಷಿ ಸಲಹೆಗಳು, ಡಾ.ಎಸ್.ಎಸ್.ಕರಭಂಟನಾಳ; 2420 ನಿರ್ವಹಣೆ, ಬೇಸಾಯದಲ್ಲಿ ಕೀಟ ನಿರ್ವಹಣೆ, ಡಾ.ಎಸ್. ಎಮ್; ವಸ್ತ್ರದ ಒಣ ಬೇಸಾಯದಲ್ಲಿ ರೋಗ ನಿರ್ವಹಣೆ, ಡಾ. ಸುಭಾಸ ನಾಯಕ; ಮಳೆಯಾಶ್ರಿತ ಸಮಗ್ರ ಕೃಷಿ ಪದ್ಧತಿಯಲ್ಲಿ ಜಾನುವಾರುಗಳ ನಿರ್ವಹಣೆ.. ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ: ವಿಜಯಪುರ | ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಣುಕಾ ಸಿದ್ದಪ್ಪ ಹರಿಜನ, ಪಂಚಾಯತಿ ಸದಸ್ಯ ಸುಭಾಸ ತಳಕೇರಿ, ಶ್ರೀಶೈಲ ಬಸಪ್ಪ ಬಿರಾದಾರ, ಮಲ್ಲಮ್ಮ ಸುಭಾಸ, ಪ್ರಗತಿಪರ ರೈತರಾದ ಕಾಶೀರಾಯಗೌಡ ಬಿರಾದಾರ, ಅಶೋಕಗೌಡ ಸುರೇಶಗೌಡ ಪಾಟೀಲ, ರಾಜೇಂದ್ರ ಶಂಕ್ರಪ್ಪ ಮುದನೂರ, ಹಿರಿಯ ತಾಂತ್ರಿಕ ಅಧಿಕಾರಿಗಳಾದ ಡಾ. ಹೆಚ್. ಎಸ್. ಮಹಾದೇವ ನುಚ್ಚಿ, ಮಹಾದೇವ ಸಾರವಾಡ, ಅನುರಾಧ ಕಗ್ಗೋಡ, ರೂಪಾ ಮುತ್ತಪ್ಪನವರ ಸೇರಿದಂತೆ ಉರುಮನಾಳ, ಕತಕನಹಳ್ಳಿ, ಹೆಗಡಿಹಾಳ, ಕವಲಗಿ ಗ್ರಾಮಗಳ ರೈತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X