ವಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು, ಆದರೆ ‘ಹೊಸ ಭಾರತ’ದಲ್ಲಿ ಅನುಮತಿಯಿಲ್ಲ: ರಾಹುಲ್

Date:

Advertisements

“ಪ್ರಜಾಸತ್ತಾತ್ಮಕವಾಗಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ ‘ಹೊಸ ಭಾರತ’ದಲ್ಲಿ ವಿಪಕ್ಷ ನಾಯಕರಿಗೆ ಮಾತನಾಡಲು ಅನುಮತಿ ನೀಡುವುದಿಲ್ಲ” ಎಂದು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಹಾ ಕುಂಭಮೇಳವನ್ನು ಒಂದು ಪ್ರಮುಖ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಭಾರತ ಇಷ್ಟು ದೊಡ್ಡ ಕಾರ್ಯಕ್ರಮ ಆಯೋಜಿಸುವ ಸಾಮರ್ಥ್ಯ ಹೊಂದಿದೆಯೇ ಎಂದು ಪ್ರಶ್ನಿಸುವವರಿಗೆ ಈ ಕಾರ್ಯಕ್ರಮ ಒಂದು ಸೂಕ್ತ ಪ್ರತಿಕ್ರಿಯೆಯಾಗಿದೆ ಎಂದು ಕೂಡಾ ಪ್ರಧಾನಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ತರಾಟೆ

Advertisements

ಹಾಗೆಯೇ, ಮಹಾಕುಂಭದ ಸಮಯದಲ್ಲಿ ಇಡೀ ಜಗತ್ತು ಭಾರತದ ಭವ್ಯತೆಯನ್ನು ಕಂಡಿದೆ. ಧಾರ್ಮಿಕ ಸಭೆಯು ಭಾರತದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೂಡಾ ಮಹಾ ಕುಂಭಮೇಳವನ್ನು ಹಾಡಿಹೊಗಳಿದ್ದಾರೆ. ಇದಾದ ಬಳಿಕ ವಿಪಕ್ಷಗಳು ಪ್ರತಿಭಟನೆ ನಡೆದಿದ್ದು, ಲೋಕಸಭೆಯನ್ನು ಮುಂದೂಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮಹಾ ಕುಂಭಮೇಳ ಯಶಸ್ವಿಯಾಗಿದೆ ಎಂದು ಹೇಳಿದ ಬೆನ್ಮಲ್ಲೇ ಕುಂಭಮೇಳದಲ್ಲಾದ ಕಾಲ್ತುಳಿತದ ಬಗ್ಗೆ, ಅದರಲ್ಲಿ ಭಕ್ತರ ಸಾವಿನ ಬಗ್ಗೆ ವಿಪಕ್ಷಗಳು ಪ್ರಧಾನಿಯನ್ನು ಪ್ರಶ್ನಿಸಿವೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿವೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಜನವರಿ 29ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದ ವೇಳೆ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಶ್ರದ್ಧಾಂಜಲಿ ಸಲ್ಲಿಸಬೇಕಿತ್ತು” ಎಂದು ಹೇಳಿದ್ದಾರೆ.

“ನಾನು ಪ್ರಧಾನಿ ಮೋದಿ ಹೇಳುವುದಕ್ಕೆ ಬೆಂಬಲ ನೀಡಬೇಕೆಂದುಕೊಂಡಿದ್ದೆ. ಯಾಕೆಂದರೆ ಕುಂಭಮೇಳ ಎಂಬುದು ಒಂದು ಸಂಪ್ರದಾಯ, ಇತಿಹಾಸ ಹಾಗೂ ಸಂಸ್ಕೃತಿಯಾಗಿದೆ. ಆದರೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಭಕ್ತರಿಗೆ ಪ್ರಧಾನಿ ಶ್ರದ್ಧಾಂಜಲಿ ಸಲ್ಲಿಸಿಲ್ಲ ಎಂಬ ದೂರು ಕೂಡಾ ಇದೆ” ಎಂದು ರಾಹುಲ್ ಗಾಂಧಿ ತಿಳಿಸಿದರು.

ಇದನ್ನು ಓದಿದ್ದೀರಾ? ಬಿಜೆಪಿ ಜೊತೆ ಸೇರಿ ಒಳಸಂಚು ಮಾಡುವವರನ್ನು ತೆಗೆದುಹಾಕಿ: ಗುಜರಾತ್ ಕಾಂಗ್ರೆಸ್‌ ಸಮಿತಿಗೆ ರಾಹುಲ್ ಗಾಂಧಿ ಕರೆ

“ಕುಂಭಮೇಳಕ್ಕೆ ಹೋದ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೇರೊಂದು ಆಸೆಯನ್ನು ಪೂರೈಸಬೇಕಾಗಿದೆ. ಯುವಕರಿಗೆ ಪ್ರಧಾನಿ ಮೋದಿ ಉದ್ಯೋಗವನ್ನು ಕೂಡಾ ನೀಡಬೇಕು. ಉದ್ಯೋಗದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಬೇಕು” ಎಂದು ಹೇಳಿದರು.

ಇನ್ನು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ನಮಗೆ ಮಾತನಾಡಲು ಅವಕಾಶ ನೀಡಿಲ್ಲ. ಪ್ರಜಾಸತ್ತಾತ್ಮಕವಾಗಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ ಹೊಸ ಭಾರತದಲ್ಲಿ ವಿಪಕ್ಷ ನಾಯಕರಿಗೆ ಮಾತನಾಡಲು ಅನುಮತಿಯಿಲ್ಲ” ಎಂದು ತಿಳಿಸಿದರು.

ಮಹಾ ಕುಂಭಮೇಳದಲ್ಲಿ ಜನವರಿ 29ರಂದು ಕಾಲ್ತುಳಿತ ಉಂಟಾಗಿದ್ದು ಸುಮಾರು 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಆಡಳಿತ ಹೇಳಿದೆ. ಆದರೆ ಮೃತರ ಸಂಖ್ಯೆ ಇನ್ನೂ ಹೆಚ್ಚಿದೆ, ಸರ್ಕಾರ ಮುಚ್ಚಿಡುತ್ತಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ. ಇನ್ನೂ 900 ಮಂದಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು ಎಂದು ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X