ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಮಾರ್ಚ್ 17ರ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -01ರ ಸಮಾಜಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕವಿಜ್ಞಾನ ವಿಷಯದ ಪರೀಕ್ಷೆಗಳಲ್ಲಿ ರಾಯಚೂರು ಜಿಲ್ಲೆಯ ಒಟ್ಟು 1,169 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.
ರಾಯಚೂರು ಜಿಲ್ಲೆಯ 49 ಕೇಂದ್ರಗಳಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಒಟ್ಟು 11,109 ಮಂದಿ ವಿದ್ಯಾರ್ಥಿಗಳು ನೋಂದಣೆಯಾಗಿದ್ದು, 10,052 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿಯಾಗಿದ್ದರೆ, 1,051 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ. ಜೀವಶಾಸ್ತ್ರ ವಿಷಯದಲ್ಲಿ ಒಟ್ಟು 4,828 ಮಂದಿ ವಿದ್ಯಾರ್ಥಿಗಳು ನೋಂದಣೆಯಾಗಿದ್ದು, 4,737 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 91 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ
ಗಣಕವಿಜ್ಞಾನ ವಿಷಯದಲ್ಲಿ ಒಟ್ಟು 1,392 ಮಂದಿ ವಿದ್ಯಾರ್ಥಿಗಳು ನೋಂದಣೆಯಾಗಿದ್ದು, 1,357 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 27 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
