ಯಾದಗಿರಿ | ಮಾ.14 ರಿಂದ ಏ.15 ರವರೆಗೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಆಗ್ರಹ

Date:

Advertisements

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಣಪೂರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ಮಾರ್ಚ್ 14 ರಿಂದ ಏಪ್ರಿಲ್ 15ರವರೆಗೆ ನಿರಂತರವಾಗಿ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸಾಮೂಹಿಕ ಸಂಘಟನೆಗಳ ವೇದಿಕೆ ಆಗ್ರಹಿಸಿತು.

ಸುರಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಹಣಮಂತರಾಯ ಚಂದಲಾಪೂರ ಮಾತನಾಡಿ, ʼಮಾ.14 ರಂದು ಸಲಹಾ ಸಮಿತಿಯಲ್ಲಿ ವಾರ ಬಂದಿ ಪದ್ಧತಿಯಂತೆ ಏಪ್ರಿಲ್ 6 ರವರೆಗೆ ಕಾಲುವೆಗೆ ನೀರು ಹರಿಸುತ್ತೇವೆಂದು ತಿಳಿಸಲಾಗಿದೆ. ಇದು ಆವೈಜ್ಞಾನಿಕ ಪರಿಹಾರವಾಗಿದೆ. ವಾರಬಂದಿ ಮಾಡದೆ ನಿರಂತರವಾಗಿ ಏಪ್ರಿಲ್ 15 ರವರೆಗೆ ನೀರು ಬಿಟ್ಟರೆ ಮಾತ್ರ ರೈತರಿಗೆ ಫಸಲು ಕೈ ಸೇರುತ್ತದೆ. ಈಗಾಗಲೇ ಸರ್ಕಾರಕ್ಕೆ ಎರಡ್ಮೂರು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಲಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಮಾರ್ಚ್ 22 ರಿಂದ 30 ರವರೆಗೆ ನೀರು ಬಂದ್ ಮಾಡಿ ಏಪ್ರಿಲ್ 6 ರವರೆಗೆ ನೀರು ಬಿಡುವುದು ತಿಳಿಸಿದ್ದಾರೆ. ಆದರೆ ಇದರಿಂದಾಗಿ ರೈತರು ಬಿತ್ತನೆ ಮಾಡಿದ ಒಂದು ಬೆಳೆ ಕೂಡಾ ಬರುವುದಿಲ್ಲ. ಬೇಸಿಗೆ ಬಿಸಿಲಿಗೆ ಬೆಳೆ ಒಣಗಿ ನಷ್ಟ ಅನುಭವಿಸುವ ಪರಿಸ್ಥಿತಿ ಬರುತ್ತದೆ. ಕೂಡಲೇ ಈ ನಿರ್ಧಾರ ಕೈಬಿಟ್ಟು ಇಂದಿನಿಂದ ವಾರಬಂದಿ ಪದ್ಧತಿಯಂತೆ ಏಪ್ರಿಲ್ 15ರ ವರೆಗೆ ಕಾಲುಗೆ ನೀರು ಹರಿಸಬೇಕುʼ ಎಂದು ಒತ್ತಾಯಿಸಿದರು.

Advertisements

ʼಒಂದು ವೇಳೆ ನೀರು ಬಿಡದಿದ್ದರೆ ರೈತರ ಬೆಳೆ ಸಂಪೂರ್ಣ ಹಾನಿಯಾಗುತ್ತದೆ. ಅದಕ್ಕೆ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ಈ ನಷ್ಟದಿಂದ ಸಾಲಬಾಧೆ ತಾಳಲಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರಬಹುದು. ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರೈತ ಸಂಘದಿಂದ ಸಂಬಂಧಪಟ್ಟ ಕಚೇರಿಗೆ ಬೀಗ ಹಾಕಿ ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ

ರೈತ ಸಂಘದ ಪ್ರಮುಖರಾದ ಅಯ್ಯಣ್ಣ ಹಾಲಭಾವಿ, ಮಹಾದೇವಿ ಬೇವಿನಾಳಮಠ, ಮಲ್ಲನಗೌಡ ಹಗರಟಗಿ, ಭೀಮಣ್ಣ ಲಕ್ಷ್ಮೀಪೂರ, ಬುಚ್ಚಪ್ಪ ನಾಯಕ, ಮಲ್ಲಣ್ಣ ಹುಬ್ಬಳಿ, ಸಿದ್ದಪ್ಪ ಗುಡ್ಡಕಾಯಿ, ವೆಂಕಟೇಶಗೌಡ ಕುಪಗಲ್, ನಿಂಗಣ್ಣ ಬಾಚಿಮಟ್ಟಿ, ಮಲ್ಲಣ್ಣ ಸಾಹುಕಾರ, ಜುಮ್ಮಣ್ಣ ಕೆಂಗೂರಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X