ವಿಧಾನಸಭೆ ಡಿಜಿಟಲೈಜೇ಼ಷನ್ ಮಾಡುವ ಬಗ್ಗೆ ಶೀಘ್ರ ಕ್ರಮ: ಸ್ಪೀಕರ್ ಖಾದರ್

Date:

Advertisements
  • ನೂತನ ಶಾಸಕರಿಗೆ ಮೂರು ದಿನ ತರಬೇತಿ ಶಿಬಿರ ಆಯೋಜನೆ
  • ಹಿರಿಯ ಮಾಜಿ ಸಚಿವರುಗಳಿಂದ ಕಿರಿಯ ಶಾಸಕರಿಗೆ ತರಬೇತಿ

ಜುಲೈ 3 ರಿಂದ ಆರಂಭವಾಗಲಿರುವ ನೂತನ ಸರ್ಕಾರದ ಬಜೆಟ್ ಅಧಿವೇಶನದ ಜೊತೆಜೊತೆಯಲ್ಲೇ ವಿಧಾನಸಭೆಯನ್ನ ಡಿಜಿಟಲೈಜೇಷನ್ ಮಾಡುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ತಿಳಿಸಿದರು.

ವಿಧಾನಸೌಧದಲ್ಲಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಅವರು ಬಜೆಟ್ ಅಧಿವೇಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ಅಧಿವೇಶನದ ಆರಂಭವಾಗುವ ಜುಲೈ 3ರ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜುಲೈ 3 ರಿಂದ 14 ನೇ ತಾರೀಖಿನ ವರೆಗೆ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಹೇಳಿದರು.

Advertisements

ವಿಧಾನಸಭೆಯನ್ನ ಡಿಜಿಟಲೈಜೇಷನ್ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುತ್ತೇವೆ. ದೇಶದಲ್ಲೇ ವಿಧಾನಭೆಯನ್ನ ಮಾದರಿಯ ಸಭೆಯನ್ನಾಗಿ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಖಾದರ್ ತಿಳಿಸಿದರು.

ಈ ಬಾರಿ 70 ಶಾಸಕರು ಪ್ರಥಮ ಬಾರಿಗೆ ಆಯ್ಕೆಯಾಗಿದ್ದಾರೆ. ಅಧಿವೇಶನದಲ್ಲಿ ನೂತನ ಶಾಸಕರು ಪಾಲ್ಗೊಳ್ಳುವುದು ತುಂಬಾ ಅವಶ್ಯ. ಈ ಹಿನ್ನೆಲೆಯಲ್ಲಿ ನೂತನ ಶಾಸಕರಿಗೆ ಮೂರು ದಿನ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು, ಅವರಿಗೆ ಹೆಲ್ತ್ ಫಿಟ್ ನೆಸ್ ಮತ್ತು ಟ್ರೈನಿಂಗ್ ಕ್ಯಾಂಪ್ ನಡೆಸಲಾಗುವುದು. ಇದರ ಜೊತೆಗೆ ನೆಲಮಂಗಲದ ಧರ್ಮಸ್ಥಳ ಕೇಂದ್ರದಲ್ಲಿ ನ್ಯಾಚರೋಪತಿ ಟ್ರಿಟ್ಮೆಂಟ್ ಕೂಡ ಇರಲಿದೆ. 26ನೇ ತಾರೀಖಿನಿಂದ ಮೂರು ದಿನಗಳ ಕಾಲ ಈ ತರಬೇತಿ ನಡೆಯಲಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ನಾಳೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವೆ: ಸಿಎಂ ಸಿದ್ದರಾಮಯ್ಯ

ಇನ್ನು ತರಬೇತಿ ಅವಧಿಯಲ್ಲಿ ಪ್ರತಿದಿನಕ್ಕೆ ಒಬ್ಬರಂತೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಕುಮಾರಸ್ಚಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಒಳಗೊಂಡಂತೆ ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ಆಯೋಜನೆ ಮಾಡಲಾಗಿದೆ ಎಂದು ಸ್ಪೀಕರ್ ಹೇಳಿದರು.

ಈ ವೇಳೆ ನೂತನ ಶಾಸಕರಿಗೆ ಸಭಾ ನಿಯಮ, ನಡಾವಳಿ ಹಾಗೂ ಕಲಾಪ ನಡೆಯುವ ರೀತಿ ಜೊತೆಗೆ ಬಜೆಟ್ ಮಂಡನೆ ಹೇಗೆ? ಶಾಸನ ರಚನೆ, ವಿಧಾನಸಭೆ ಮತ್ತು ಪರಿಷತ್ ಮಹತ್ವ ಏನು? ಶಾಸಕ ಹಕ್ಕುಗಳು ಏನು ಎಂಬೆಲ್ಲ ಮಾಹಿತಿಯನ್ನ ನೀಡಲಾಗುತ್ತದೆ ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X