‘ಬ್ರ್ಯಾಂಡ್​ ಬೆಂಗಳೂರು’ ಕಲ್ಪನೆ ಜಾರಿಗೆ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ ಡಿಸಿಎಂ ಡಿಕೆ ಶಿವಕುಮಾರ್

Date:

Advertisements
  • ‘ಬ್ರ್ಯಾಂಡ್​ ಬೆಂಗಳೂರು’ ಬಗ್ಗೆ ಎರಡನೇ ಸಭೆ ನಡೆಸಿದ ಡಿಸಿಎಂ
  • ‘ಟನಲ್‌ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ’

ಸಮಗ್ರ ರಾಜಧಾನಿಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ‘ಬ್ರ್ಯಾಂಡ್​ ಬೆಂಗಳೂರು’ ಕಲ್ಪನೆ ಬಗ್ಗೆ ಸಾಮಾನ್ಯ ಜನರಿಂದ ಹಿಡಿದು ಎಲ್ಲ ವರ್ಗದ ಜನರಿಂದ ಸಲಹೆಗಳನ್ನು ಸರ್ಕಾರ ಆಹ್ವಾನಿಸಿದೆ.

ಈ ಕುರಿತು ಬುಧವಾರ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ‘ಬ್ರ್ಯಾಂಡ್​ ಬೆಂಗಳೂರು’ ಬಗ್ಗೆ ಎರಡನೇ ಸಭೆ ನಡೆಯಿತು. ಈ ಸಭೆಯಲ್ಲಿ ಬ್ರಾಂಡ್ ಬೆಂಗಳೂರಿಗೆ ಸಾರ್ವಜನಿಕರು ಮಾಹಿತಿ ನೀಡಲು ಪೋರ್ಟಲ್ ಲಾಂಚ್ ಮಾಡಿದರು.

ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್‌, “ಬೆಂಗಳೂರಿನಲ್ಲಿ ಚಿಕ್ಕ ಸಮಸ್ಯೆ ಕಂಡುಬಂದರೂ ಹೊರಗೆ ದೊಡ್ಡದಾಗಿ ಬಿಂಬಿತವಾಗುತ್ತೆ. ಕಾರಣ ಬೆಂಗಳೂರು ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರ. ಹೀಗಾಗಿ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಕುರಿತು ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಜುಲೈ 15ರ ಒಳಗೆ ಸಾರ್ವಜನಿಕರು ಸಲಹೆ ಕೊಡಬಹುದು” ಎಂದರು.

Advertisements

“ಈಗಾಗಲೇ ಬಿಲ್ಡರ್ಸ್‌, ಉದ್ಯಮಿಗಳ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈಗ ಸಾಮಾನ್ಯ ಜನರ ಸಲಹೆಗಳನ್ನು ನಾವು ಕೇಳುತ್ತೇವೆ. ಮಾಜಿ ಸಿಎಂ ಬೊಮ್ಮಾಯಿ ಅವರ ಸಲಹೆಯನ್ನೂ ಕೇಳುತ್ತೇವೆ. ಅವರ ಭೇಟಿಗೆ ಸಮಯ ಕೇಳಿದ್ದೆ, ಅವರು ಸದ್ಯ ಬ್ಯುಸಿ ಇದ್ದಾರೆ” ಎಂದರು.

“1 ಕೋಟಿ 60 ಲಕ್ಷ ಜನ ಬೆಂಗಳೂರಿನಲ್ಲಿ ಇದ್ದಾರೆ. ಆದರೆ ಪ್ರತಿದಿನ ಬಂದು ಹೋಗುವವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ನೆಲೆಸಲು ಇಷ್ಟಪಡುತ್ತಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಏನು ಕೊಡಬೇಕು ಅಂತ ಮುಖ್ಯಮಂತ್ರಿ ಅವರು ಅಧ್ಯಯನ ಮಾಡುತ್ತಿದ್ದಾರೆ. ಅದನ್ನು ಅವರೇ ಘೋಷಣೆ ಮಾಡ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಹೊಸ ʼಸ್ಮಾರ್ಟ್ ಸಿಟಿʼ ದಾವಣಗೆರೆಯ ಭರಾಟೆಯಲಿ ಹಳೆಯ ಡಾವಣಗೇರಿ ಕಳೆಯದಿರಲಿ

ಟನಲ್‌ ಮಾಡುವ ಬಗ್ಗೆ ಚರ್ಚೆ

“ಪ್ರಮುಖ ನಗರಗಳಲ್ಲಿ ಫುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರಂ, ಬಸವನಗುಡಿಯಲ್ಲಿ ಫುಟ್ ಪಾತ್ ಸಮಸ್ಯೆ ಬಹಳ ಇದೆ. ಬೆಂಗಳೂರು ಟ್ರಾಫಿಕ್ ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಟನಲ್‌ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ” ಎಂದರು.

ಏಳು ವಿಚಾರದಲ್ಲಿ ಜನರು ಸಲಹೆ ನೀಡಬಹುದು.

ಸಂಚಾರಮುಕ್ತ ಬೆಂಗಳೂರು
ಹಸಿರು ಬೆಂಗಳೂರು
ಸ್ವಚ್ಛ ಬೆಂಗಳೂರು
ಜನಹಿತ ಬೆಂಗಳೂರು
ಆರೋಗ್ಯಕರ ಬೆಂಗಳೂರು
ಟೆಕ್‌ ಬೆಂಗಳೂರು
ಜಲಸುರಕ್ಷಾ ಬೆಂಗಳೂರು

www.brandbengaluru.karnataka.gov.in ವೆಬ್ ಸೈಟ್ ನಲ್ಲಿ ಜನರು ಸಲಹೆ ನೀಡಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X