ಏಪ್ರಿಲ್‌ನಿಂದ ಬೆಲೆ ಹೆಚ್ಚಿಸಲಿರುವ ಕಾರು ಕಂಪನಿಗಳು

Date:

Advertisements

ದೇಶದ ಪ್ರಮುಖ ಕಾರು ಉತ್ಪಾದಕ ಕಂಪನಿಗಳಾದ ಟಾಟಾ ಮೋಟರ್ಸ್, ಕಿಯಾ ಇಂಡಿಯಾ ಮತ್ತು ಮಾರುತಿ ಸುಜುಕಿ ಮುಂದಿನ ತಿಂಗಳಿನಿಂದ ಜಾರಿಯಾಗುವಂತೆ ಬೆಲೆ ಏರಿಕೆಯನ್ನು ಘೋಷಿಸಿವೆ. ಈ ವರ್ಷದ ಜನವರಿಯಲ್ಲಿ ಬೆಲೆ ಏರಿಕೆ ಮಾಡಿದ ಕೆಲವೇ ತಿಂಗಳಲ್ಲಿ ಈ ಘೋಷಣೆ ಹೊರಬಿದ್ದಿದೆ.

ಸರಕುಗಳ ಬೆಲೆ ಏರಿಕೆ, ಪೂರೈಕೆ ಸರಣಿಯ ವೆಚ್ಚ ಹೆಚ್ಚಳ ಮತ್ತು ಹಣದುಬ್ಬರದ ಒತ್ತಡ ಕಾರಣದಿಂದ ಬೆಲೆ ಏರಿಕೆ ಅನಿವಾರ್ಯ ಎಂದು ಕಂಪನಿಗಳು ತಿಳಿಸಿವೆ.

ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಎಲ್ಲ ಪ್ರಯಾಣಿಕ ವಾಹನಗಳ ಬೆಲೆಯನ್ನು ಏಪ್ರಿಲ್‌ನಿಂದ ಏರಿಸುವುದಾಗಿ ಟಾಟಾ ಮೋಟರ್ಸ್ ಮಂಗಳವಾರ ಪ್ರಕಟಿಸಿದೆ. ಜನವರಿಯಲ್ಲಿ ಪ್ರಯಾಣಿಕ ವಾಹನಗಳ ಬೆಲೆಯನ್ನು ಕಂಪನಿ ಶೇಕಡ 3ರಷ್ಟು ಹೆಚ್ಚಿತ್ತು. ಇದರ ಜತೆಗೆ ವಾಣಿಜ್ಯ ವಾಹನಗಳ ಬೆಲೆಯನ್ನೂ ಶೇಕಡ 2ರಷ್ಟು ಹೆಚ್ಚಿಸಲಾಗಿದ್ದು, ಮುಂದಿನ ತಿಂಗಳಿನಿಂದ ಇದು ಜಾರಿಗೆ ಬರಲಿದೆ. ಟಾಟಾ ಮೋಟರ್ಸ್ 5 ಲಕ್ಷದಿಂದ ಆರಂಭವಾಗಿ 25.09 ಲಕ್ಷವರೆಗಿನ ಕಾರುಗಳ ಶ್ರೇಣಿಯನ್ನು ಹೊಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ ಕೈಯಲ್ಲಿ ಶಿಕ್ಷಣ, ಖರ್ಗೆಯವರ ಸಿಟ್ಟು ಮತ್ತು ಬಡವರ ಮಕ್ಕಳು

ಕಿಯಾ ಇಂಡಿಯಾ ಕೂಡಾ ಶೇಕಡ 3ರಷ್ಟು ಬೆಲೆ ಏರಿಕೆಯನ್ನು ಘೋಷಿಸಿದೆ. ಜನವರಿಯಲ್ಲಿ ಶೇಕಡ 3ರಷ್ಟು ಬೆಲೆ ಏರಿಕೆ ಮಾಡಿದ ಬಳಿಕ ಇದು ಎರಡನೇ ಏರಿಕೆಯಾಗಿದೆ. ಭಾರತದ ಅತಿದೊಡ್ಡ ಕಾರು ಉತ್ಪಾದಕ ಕಂಪನಿಯಾದ ಮಾರುತಿ ಸುಜುಕಿ ಶೇಕಡ 4ರಷ್ಟು ಬೆಲೆ ಏರಿಕೆ ಘೋಷಿಸಿದ್ದು, 2025ರಲ್ಲಿ ಮೂರನೇ ಬಾರಿಗೆ ಬೆಲೆ ಏರಿಕೆ ಮಾಡಲಿದೆ. ಕಳೆದ ಜನವರಿ ಹಾಗೂ ಫೆಬ್ರುವರಿಯಲ್ಲಿ ಎರಡು ಹಂತಗಳಲ್ಲಿ ಬೆಲೆ ಹೆಚ್ಚಿಸಲಾಗಿತ್ತು.

ಪ್ರಯಾಣಿಕ ವಾಹನಗಳ ಮಾರಾಟ ಕುಸಿತದ ನಡುವೆಯೇ ಇದೀಗ ಬೆಲೆ ಏರಿಕೆ ನಿರ್ಧಾರ ಪ್ರಕಟವಾಗಿದೆ. ಕಾರು ಉತ್ಪಾದಕರು ಮತ್ತು ಡೀಲರ್ ಶೋರೂಂಗಳು ಕಡಿಮೆ ಬೇಡಿಕೆಯ ಮಾಡೆಲ್‌ಗಳ ಮೇಲೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದ್ದು, ಎಫ್ಎಡಿಎ ಅಂಕಿ ಅಂಶಗಳ ಪ್ರಕಾರ, ಚಿಲ್ಲರೆ ಪ್ರಯಾಣಿಕ ವಾಹನಗಳ ಮಾರಾಟ 2025ರ ಫೆಬ್ರವರಿಯಲ್ಲಿ 3.03 ಲಕ್ಷಕ್ಕೆ ಇಳಿದಿದ್ದು, ಶೇಕಡ 10.34ರಷ್ಟು ಕುಸಿತ ದಾಖಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X