ಸಂಡೂರು | ಹೊಸದರೋಜಿ ಗ್ರಾಮ ಪಂ. ಪಿಡಿಒ ಅಮಾನತು

Date:

Advertisements

ಸರ್ಕಾರದ ಆದೇಶದಕ್ಕೆ ವಿರುದ್ಧವಾಗಿ 9/11 ಪ್ರಮಾಣಪತ್ರಗಳನ್ನು ವಿತರಣೆ ಮಾಡಿದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಮತ್ತು ಎಸ್‌ಡಿಎ ಅಧಿಕಾರಿಯನ್ನು ಅಮಾನತು ಮಾಡಿಲಾಗಿದೆ.

ಸಂಡೂರು ತಾಲೂಕಿನ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಸಿದ್ಧಲಿಂಗಸ್ವಾಮಿ, ಎಸ್‍ಡಿಎ ಸಿದ್ಧರಾಮ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಇಬ್ಬರನ್ನೂ ಅಮಾನತುಗೊಳಿಸಿ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್ ಆದೇಶಿಸಿದ್ದಾರೆ.

ಹೊಸದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ನಿಯಮಬಾಹಿರತವಾಗಿ 9/11 ಪ್ರಮಾಣಪತ್ರಗಳನ್ನು ಪಿಡಿಒ ಸಿದ್ದಲಿಂಗಸ್ವಾಮಿ ಮತ್ತು ಎಸ್‌ಡಿಎ ಸಿದ್ದರಾಮ ಅವರು ವಿತರಣೆ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ. ವಿಚಾರಣೆ ಬಾಕಿ ಇರುವ ಕಾರಣ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಸಿಇಒ ಹ್ಯಾರಿಸ್ ತಿಳಿಸಿದ್ದಾರೆ.

Advertisements

ಪತ್ರಕರ್ತರಿಗೆ ಬೆದರಿಕೆ ಆರೋಪ; ಪಿಡಿಒ ಅಮಾನತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಳ್ಳೋಳ್ಳಿ ಗ್ರಾಮ ಪಂಚಾಯತಿ ಪಿಡಿಒ ದೇವಿಂದ್ರಪ್ಪ ಭಾಲ್ಕಿ ಅವರು ಪತ್ರಕರ್ತ ನಾಗಯ್ಯ ಸ್ವಾಮಿ ಎಂಬವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಪಿಡಿಒ ದೇವಿಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಚಿತ್ತಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಅಳ್ಕೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಹಾಗೂ ಖರ್ಚು ವೆಚ್ಚದ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಪತ್ರಕರ್ತ ನಾಗಯ್ಯ ಮಾಹಿತಿ ಕೇಳಿದ್ದರು. ಆದರೆ, ಮಾಹಿತಿ ನೀಡದ ಪಿಡಿಒ ದೇವಿಂದ್ರಪ್ಪ ಮಾರ್ಚ್‌ 5ರಂದು ಪತ್ರಕರ್ತನಿಗೆ ಕರೆ ಮಾಡಿ, ‘ಆರ್‌ಟಿಐ ಸಲ್ಲಿಸಿ, ಬ್ಲಾಕ್‌ಮೇಲ್ ಮಾಡ್ತಿದ್ದೀಯಾ? ನಿನ್ನ ವಿರುದ್ಧ ಕೇಸ್‌ ಹಾಕಿ ಜೈಲಿಗೆ ಹಾಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ. ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X