ಬಳ್ಳಾರಿ | ಆಧಾರ್‌ನೊಂದಿಗೆ ‌ʼಎಪಿಕ್ʼ ಜೋಡಣೆಗೆ ಶೀಘ್ರ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

Date:

Advertisements

ಆಧಾರ್‌ನೊಂದಿಗೆ ʼಎಪಿಕ್ʼ(ಮತದಾರರ ಗುರುತಿನ ಚೀಟಿ) ಸಂಖ್ಯೆಯನ್ನು ಕೂಡಲೇ ಜೋಡಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಬಳ್ಳಾರಿ ವಾರ್ತಾ ಇಲಾಖೆ ಪ್ರಕಟಣೆ ಹೊರಡಿಸಿದ್ದು, “ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಮಂಗಳವಾರ ಸಭೆ ನಡೆಸಿ ಚರ್ಚಿಸಿದ್ದಾರೆ” ಎಂದು ತಿಳಿಸಿದೆ.

“ಚುನಾವಣಾ ಆಯೋಗವು ಆರ್ಟಿಕಲ್ 326, ಆರ್‌ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯುಐಡಿಎಐ ಮತ್ತು ಇಸಿಐ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ” ಎಂದು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ಪೊಲೀಸ್‌ ಇಲಾಖೆ ಮನವಿ

“ಭಾರತದ ಸಂವಿಧಾನದ 326ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಹಾಗಾಗಿ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326ನೇ ವಿಧಿ, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6)ರ ನಿಬಂಧನೆಗಳ ಪ್ರಕಾರ ಕ್ರಮವಹಿಸಲಾಗುವುದು. ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆಯೆಂದು ತಿಳಿಸಿದ್ದಾರೆ” ಎಂದು ವಾರ್ತಾ ಇಲಾಖೆ ಪ್ರಕಟಣೆ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X