ನಾಗ್ಪುರ ಹಿಂಸಾಚಾರ | ವಿಎಚ್‌ಪಿ, ಬಜರಂಗ ದಳದ ಮುಖಂಡರೂ ಸೇರಿ 78 ಮಂದಿ ಬಂಧನ

Date:

Advertisements

ಔರಂಗಜೇಬ್ ಸಮಾಧಿ ತೆರವುಗೊಳಿಸಬೇಕೆಂದು ಹಿಂದುತ್ವವಾದಿಗಳು ನಡೆಸಿದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆದಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ ‘ಕರ್ಫ್ಯೂ’ ವಿಧಿಸಲಾಗಿದೆ. ಅಲ್ಲದೆ, ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ, ಬಜರಂಗ ದಳದ ಮುಖಂಡರು, ಕಾರ್ಯಕರ್ತರು ಸೇರಿ ಒಟ್ಟು 78 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ನಡೆದ ಗಲಭೆಗೆ ಫಹೀಮ್ ಖಾನ್ (38) ರುವಾರಿ ಎಂದು ಪೊಲೀಸರು ಗುರುತಿಸಿದ್ದಾರೆ. ಆತನನ್ನು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ.

ಔರಂಗಜೇಬ್ ಸಮಾಧಿ ತೆರವಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಔರಂಗಬೇಜ್ ಪ್ರತಿಕೃತಿ ಮತ್ತು ಧಾರ್ಮಿಕ ಚಾದರ್ ಅನ್ನು ದಹಿಸಿದ್ದರು. ಧಾರ್ಮಿಕ ಭಾವನೆಗೆ ಹಿಂದುತ್ವವಾದಿಗಳು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ, ಮುಸ್ಲಿಂ ಮುಖಂಡರು ನಾಗ್ಪುರದ ಗಣೇಶಪೇಟೆ ಪೊಲೀಸ್ ಠಾಣೆಗೆ ತೆರಳಿದ್ದರು.

Advertisements

ಈ ವೇಳೆ, ಪೊಲೀಸರು ಆರೋಪಿಗಳಿಗೆ ನೀರಕ್ಷಣೆ ನೀಡುತ್ತಿದ್ದಾರೆ ಎಂದು ಆಪಾದಿಸುವ ಎರಡು ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ಫಾಹೀಮ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನು. ಆತ ಹರಿಬಿಟ್ಟ ವಿಡಿಯೋಗಳ ಕಾರಣಕ್ಕಾಗಿಯೇ ಗಲಭೆ ಆರಂಭವಾಗಿದೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ಈ ವರದಿ ಓದಿದ್ದೀರಾ?: ನಾಗ್ಪುರ ಹಿಂಸಾಚಾರ ಪೂರ್ವಯೋಜಿತ, ‘ಛಾವಾ’ ಚಿತ್ರದಿಂದಾಗಿ ಔರಂಗಜೇಬ್‌ ಮೇಲೆ ಆಕ್ರೋಶ: ಫಡ್ನವೀಸ್

ಗಲಭೆ ಸಂಬಂಧ ಗಣೇಶಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸುವುದಕ್ಕೂ ಮುನ್ನವೇ ಬಜರಂಗದಳ ಮತ್ತು ವಿಎಚ್‌ಪಿಯ ಎಂಟು ಮಂದಿ ಆರೋಪಿಗಳು ಪೊಲೀಸರ ಎದುರು ಶರಣಾಗಿದ್ದಾರೆ. ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಉಳಿದಂತೆ 27 ಮಂದಿ ಹಿಂದುತ್ವವಾದಿ ಕಾರ್ಯಕರ್ತರು ಮತ್ತು ವಿವಿಧ ಸಮುದಾಯಗಳ 43 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಗ್ಪುರದಲ್ಲಿ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 1,200ಕ್ಕೂ ಹೆಚ್ಚು ಮಂದಿ ಷಾಮೀಲಾಗಿದ್ದಾರೆ. 1,500ಕ್ಕೂ ಹೆಚ್ಚು ಕಣ್ಗಾವಲು ಕ್ಯಾಮೆರಾಗಳು ವಿಫಲವಾದ ಹಿನ್ನೆಲೆಯಲ್ಲಿ ಅವರನ್ನು ಪತ್ತೆ ಮಾಡುವ ಪ್ರಯತ್ನಕ್ಕೆ ಹಿನ್ನಡೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X