ಬಳ್ಳಾರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಬಿಜೆಪಿ ಯುವ ಮುಖಂಡನ ಬಂಧನ

Date:

Advertisements

ಕರ್ನಾಟಕ ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಳ್ಳಾರಿ ಜಿಲ್ಲಾ ಪಂಚಾಯತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ದೇವು ನಾಯಕ ಎಂಬಾತ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ.

ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಡುವಿ ಗ್ರಾಮದಲ್ಲಿ ನಡೆದಿದೆ. ಬೀದಿಯಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಆಕೆಯ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಇನ್ನು ಕೃತ್ಯಕ್ಕೆ ಓರ್ವ ಮಹಿಳೆ ಕೂಡ ಸಾಥ್ ನೀಡಿದ್ದಾರೆ ಎನ್ನಲಾಗಿದೆ.

ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಆರೋಪಿ ದೇವು ನಾಯಕ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದಾನೆ. ಈ ಬಗ್ಗೆ ರಾಜ್ಯದ ಹಿರಿಯ ನಾಯಕರನ್ನು ಸಂಪರ್ಕ ಮಾಡಿ ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸುತ್ತಿದ್ದನು. ಜೊತೆಗೆ, ಬಿಜೆಪಿ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದಾನೆ. ಆರೋಪಿ ದೇವು ನಾಯಕ ತನ್ನ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜತೆ ಇರುವ ಫೋಟೋ ಹಂಚಿಕೊಳ್ಳುತ್ತಿದ್ದ.

Advertisements

ಇನ್ನು ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಮಹನೀಯರ ಜಯಂತಿ ಅದ್ದೂರಿ ಆಚರಣೆ: ಡಿಸಿ ಪ್ರಶಾಂತ್‌ ಮಿಶ್ರಾ

ಪ್ರಕರಣ ದಾಖಲಾದ ಬೆನ್ನಲ್ಲಿಯೇ ಸಿರಿಗೇರಿ ಠಾಣೆ ಪೊಲೀಸರು ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತನಿಖೆ ಮುಂದುವರೆಸಿದ್ದಾರೆ. ಈ ಸಂಬಂಧ ಸಿರಿಗೇರಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

Download Eedina App Android / iOS

X