ಉಡುಪಿ | ಮಳೆಗಾಲ: ಘಾಟಿ ರಸ್ತೆಗಳಲ್ಲಿ ನಿಮಗೆ ನೀವೇ ಜವಾಬ್ದಾರರು

Date:

Advertisements

ತಡವಾಗಿಯಾದರೂ ಮುಂಗಾರು ಮಳೆ ರಾಜ್ಯವನ್ನು ಪ್ರವೇಶಿಸಿದೆ. ಮಂಗಳವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಲ್ಲಿನ ಘಾಟಿ ರಸ್ತೆಗಳಲ್ಲಿ ಸಂಚಾರ ಮಾಡುವುದು ಅಪಾಯಕಾರಿಯಾಗಿ ಪರಿಣಮಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಕುದುರೆಮುಖ-ಮಾಳ ರಾಷ್ಟ್ರೀಯ ಹೆದ್ದಾರಿಯು ಅರಣ್ಯ ಭಾಗದಲ್ಲಿ ಹಾದುಹೋಗಿದೆ. ಹೆಚ್ಚು ತಿರುವುಗಳಿರುವ ಈ ರಸ್ತೆಯಲ್ಲಿ ಮಳೆ ಬೀಳುವ ಸಮಯದಲ್ಲಿ ವಾಹನ ಚಾಲನೆ ಮಾಡುವುದು ಸವಾಲಾಗಿದೆ. ಮರ ಬೀಳುವುದು, ಮಣ್ಣು ಕುಸಿತ, ನೀರಿನ ಹರಿವಿನಿಂದ ರಸ್ತೆಯಲ್ಲಿ ಸಂಚಾರ ಅಸಾಧ್ಯವೆಂಬಂತಾಗುತ್ತದೆ.

ಈ ರಸ್ತೆಯಲ್ಲಿ ಅಪಘಾತವೇನಾದರೂ ಸಂಭವಿಸಿದರೆ, ಹತ್ತಿರದಲ್ಲಿ ಆಸ್ಪತ್ರೆಗಳೂ ಇಲ್ಲ. ಅಪಘಾತಕ್ಕೀಡಾದವರು ಶೃಂಗೇರಿ ಅಥವಾ ಕಾರ್ಕಳಕ್ಕೆ ತೆರಳಬೇಕಾಗುತ್ತದೆ.

Advertisements

ಇನ್ನು ಮಾಳ-ಮುಳ್ಳೂರು ರಸ್ತೆಯಲ್ಲಿಯೂ ಅದೇ ಕತೆ. ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು ಸೇರಿದಂತೆ ನಾನಾ ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಸಾವಿರಾರು ಜನರು ಸಂಚರಿಸುತ್ತಾರೆ. ಮಳೆ ಸಮಯದಲ್ಲಿ ಘಾಟಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ನಿಯಂತ್ರಣ ತಪ್ಪುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸ್ಥಳೀಯರು ಹೇಳುತ್ತಾರೆ.

ತನಿಕೋಡು ಅರಣ್ಯ ತಪಾಸಣಾ ಕೇಂದ್ರ ಮತ್ತು ಮಾಳ ಅರಣ್ಯ ತಪಾಸಣಾ ಕೇಂದ್ರದ ನಡುವೆ 39 ಕಿ.ಮೀ ಅಂತರವಿದೆ. ಈ ರಸ್ತೆಯಲ್ಲಿ ಸಂವಹನ ಮಾಡಲು ಯಾವುದೇ ಸಂಪರ್ಕ ವ್ಯವಸ್ಥೆಯಿಲ್ಲ. ಅಪಘಾತವಾದರೆ, ಗಲಾಟೆಗಳು ನಡೆದರೆ, ಅನಾಹುತಗಳು ಸಂಭವಿಸಿದರೆ ಅಥವಾ ಬೇರೇನಾದರೂ ಸಮಸ್ಯೆಗಳಾದರೆ, ಯಾವ ರೀತಿಯಲ್ಲೂ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗುವುದಿಲ್ಲವೆಂಬ ಆರೋಪಗಳೂ ಇವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X