ಬೆಂಗಳೂರು | ಸಹೋದ್ಯೋಗಿಯೊಂದಿಗೆ ಪತ್ನಿ ಸ್ನೇಹ: ಮನನೊಂದು ಪತಿ ಆತ್ಮಹತ್ಯೆ

Date:

Advertisements
  • ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ ಆಂಡ್ರ್ಯೂ ಅಕ್ಕ
  • ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆಂಡ್ರ್ಯೂ ಪತ್ನಿ

42ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿ ಆಕೆಯ ಸಹೋದ್ಯೋಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಮನನೊಂದು ಸುಬ್ರಹ್ಮಣ್ಯನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆ ಜೂನ್ 16ರಂದು ನಡೆದಿದೆ. ಮೃತ ವ್ಯಕ್ತಿಯ ಹೆಸರು ಆಂಡ್ರ್ಯೂ (ಹೆಸರು ಬದಲಾಯಿಸಲಾಗಿದೆ). ಇವರು ಖಾಸಗಿ ಬ್ಯಾಂಕ್‌ನಲ್ಲಿ ಸಹಾಯಕ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ದಂಪತಿಗೆ ಇಬ್ಬರು ಮಕ್ಕಳಿದ್ದರು. ಈ ಕುಟುಂಬ ಮೊದಲಿಗೆ ವಿದ್ಯಾರಣ್ಯಪುರದಲ್ಲಿ ವಾಸಿಸುತ್ತಿತ್ತು. ಆಂಡ್ರ್ಯೂ ಅವರ ಪತ್ನಿ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisements

ಆಂಡ್ರ್ಯೂ ಪತ್ನಿ ತಾನು ಕಾರ್ಯನಿರ್ವಹಿಸುವ ಆಸ್ಪತ್ರೆಗೆ ಹತ್ತಿರವಾಗಲು ಸುಬ್ರಹ್ಮಣ್ಯನಗರದಲ್ಲಿ ತನ್ನ ವೈದ್ಯ ಸಹೋದ್ಯೋಗಿಯೊಬ್ಬರ ಸಹಾಯದಿಂದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು.

ಬಳಿಕ ಮಹಿಳೆಯು ತನ್ನ ಸಹೋದ್ಯೋಗಿ ವೈದ್ಯರೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಂಡರು. ದಿನಕಳೆದಂತೆ ಕೆಲಸಕ್ಕೆ ಕರೆದುಕೊಂಡು ಹೋಗುವುದು ಮನೆಗೆ ಕರೆದುಕೊಂಡು ಬಂದು ಬಿಡುವ ಕೆಲಸವನ್ನು ವೈದ್ಯರೇ ಮಾಡಲು ಪ್ರಾರಂಭಿಸಿದರು. ಆಂಡ್ರ್ಯೂ ಅವರ ಕುಟುಂಬದ ವಿಷಯಗಳಲ್ಲಿ ವೈದ್ಯರು ಸಹ ತಲೆಹಾಕತೊಡಗಿದರು.

ಈ ವಿಚಾರ ಆಂಡ್ರ್ಯೂ ಅವರನ್ನು ಬಹಳ ವಿಚಲಿತಗೊಳಿಸಿತು. ಈ ಬಗ್ಗೆ ಆಂಡ್ರ್ಯೂ ಅವರು ತಮ್ಮ ಸಹೋದರಿಯೊಂದಿಗೆ ಹೇಳಿಕೊಂಡಿದ್ದರು ಹಾಗೂ ತಾವು ಇದರಿಂದ ತೀವ್ರ ಮಾನಸಿಕ ನೋವು ಅನುಭವಿಸುತ್ತಿದ್ದೇನೆ ಎಂದಿದ್ದರು.

ಈ ಬಗ್ಗೆ ಆಂಡ್ರ್ಯೂ ಅಕ್ಕ ಸುಬ್ರಹ್ಮಣ್ಯನಗರ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಪ್ರಕಾರ ಶುಕ್ರವಾರ ಬೆಳಗ್ಗೆ 8.30ಕ್ಕೆ ಆಂಡ್ರ್ಯೂ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪತ್ನಿಗೆ ಕರೆ ಮಾಡಿದ್ದರು. ಅವರ ತಮ್ಮನ ಸಾವಿಗೆ ವೈದ್ಯರೇ ಕಾರಣ ಎಂದು ದೂಷಿಸಿದರು.

ಈ ಸುದ್ದಿ ಓದಿದ್ದೀರಾ? ತನ್ನ ಶಾಲೆಗಳನ್ನು ಶಿಕ್ಷಣ ಇಲಾಖೆಯ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಮನವಿ ಮಾಡಿದ ಬಿಬಿಎಂಪಿ

ಆಂಡ್ರ್ಯೂ ಅಕ್ಕ ನೀಡಿದ ದೂರಿನ ಆಧಾರದ ಮೇಲೆ ಸುಬ್ರಹ್ಮಣ್ಯನಗರ ಪೊಲೀಸರು ವೈದ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X