ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಅಳವಡಿಕೆ; ಕುರುಬ ಸಮುದಾಯಕ್ಕೆ ಬಹಿಷ್ಕಾರ

Date:

Advertisements

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸವರ್ಣೀಯರು ಗೊಂಡ(ಕುರುಬ) ಸಮುದಾಯದವರನ್ನು ಬಹಿಷ್ಕರಿಸಿದ ಹಿನ್ನೆಲೆ ಕಲ್ಯಾಣ ಕರ್ನಾಟಕ ಗೊಂಡ ಸಮಾಜದ ಒಕ್ಕೂಟ ಧರಣಿ ಸತ್ಯಾಗ್ರಹ ನಡೆಸಿದೆ. ಬಳಿಕ ತಾಲೂಕು ಆಡಳಿತ ಖಾನಾಪುರ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಎರಡೂ ಸಮುದಾಯಗಳು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಇರುವಂತೆ ತಿಳಿಸಿದೆ.

“ಇನ್ನು ಮುಂದೆ ಇಂತಹ ಘಟನೆ ನಡೆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಡಿವೈಎಸ್‌ಪಿ ಗೋಪಿ ಎಚ್ಚರಿಕೆ ನೀಡಿದರು.

Advertisements

ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಆಳಂದ ತಹಶೀಲ್ದಾರ್ ಅಣ್ಣರಾವ್ ಪಾಟೀಲ್, ಡಿವಎಸ್‌ಪಿ ಗೋಪಿ, ಸಿಪಿಐ, ಇಒ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪಿಡಿಒ ಸೇರಿದಂತೆ ಗೊಂಡ ಸಮಾಜದ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಅಂಬರೀಶ ಮಲ್ಲೇಶಿ, ಸಂಸ್ಥಾಪಕ ಕಾರ್ಯದರ್ಶಿ ಬಾಲಾಜಿ ಜಬಾಡೆ, ಆಕಾಶ್ ದೇಗಾಂವ್, ಗ್ರಾಮದ ಕುರುಬ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X