ಮಧ್ಯಪ್ರದೇಶ ಬಿಜೆಪಿ ಸರ್ಕಾರ ನಿದ್ದೆಗೆ ಜಾರಿದೆ; ಕಾಂಗ್ರೆಸ್‌ನಿಂದ ‘ಕುಂಭಕರ್ಣ’ ಪ್ರತಿಭಟನೆ

Date:

Advertisements

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆಯನ್ನು ನಡೆಸಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟನೆಯ ವಿಡಿಯೋ ಹರಿದಾಡುತ್ತಿದೆ. ಮಲಗಿರುವ ಬಿಜೆಪಿ ಸರ್ಕಾರವನ್ನು ಎಬ್ಬಿಸಲು ಕಾಂಗ್ರೆಸ್‌ ‘ಕುಂಭಕರ್ಣ’ ಪ್ರತಿಭಟನೆಯನ್ನು ನಡೆಸಿದೆ.

ಶಾಸಕರು ಹಗರಣಗಳು ಮತ್ತು ಭ್ರಷ್ಟಾಚಾರಗಳನ್ನು ಮಾಡಿದರೂ ಕೂಡಾ ಸರ್ಕಾರ ಮಾತ್ರ ಕುಂಭಕರ್ಣನಂತೆ ಮಲಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಹಾಗೆಯೇ ಕುಂಭಕರ್ಣನಂತೆ ವೇಷ ಧರಿಸಿ ನಿದ್ದೆಗೆ ಜಾರಿರುವಂತೆ ನಟಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಅಪರಾಧ ಹೆಚ್ಚಳ | ತನ್ನ ತಟ್ಟೆಯಲ್ಲಿ ಹೆಗ್ಗಣ, ಕಾಂಗ್ರೆಸ್ ತಟ್ಟೆಯ ನೊಣದತ್ತ ಬಿಜೆಪಿ ಬೊಟ್ಟು!

Advertisements

ಹಾಗೆಯೇ ಮಲಗಿರುವ ಸರ್ಕಾರವನ್ನು ಪ್ರತಿನಿಧಿಸುವ ಕುಂಭಕರ್ಣ ವೇಷಾಧಾರಿಯನ್ನು ಎಬ್ಬಿಸಲು ಕಾಂಗ್ರೆಸ್ ನಾಯಕರು ಪೀಪಿ ಊದಿ ಪ್ರತಿಭಟಿಸಿದ್ದಾರೆ. ವಿಪಕ್ಷ ನಾಯಕ ಉಮಾಂಗ್ ಸಿಂಘಾರ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಶಾಸಕ ದಿನೇಶ್ ಜೈನ್ ಕುಂಭಕರ್ಣನಂತೆ ವೇಷ ಧರಿಸಿದ್ದರು.

“ದೇಶದಲ್ಲಿ ನಿರಂತರವಾಗಿ ಹಗರಣ ನಡೆಯುತ್ತಿದ್ದರೂ ಕೂಡಾ ಬಿಜೆಪಿ ಸರ್ಕಾರವು ಕುಂಭಕರ್ಣನಂತೆ ಮಲಗಿದೆ. ಆದ್ದರಿಂದ ನಾವು ಈ ರೀತಿಯಾಗಿ ವಿನೂತನ ಪ್ರತಿಭಟನೆ ನಡೆಸಿದ್ದೇವೆ. ರಾಜ್ಯದಲ್ಲಿ ನರ್ಸಿಂಗ್ ಹಗರಣ, ಸಾರಿಗೆ ಹಗರಣ, ಪತ್ವಾರಿ ಹಗರಣ ನಡೆದಿದೆ. ಯುವಕರಿಗೆ ಉದ್ಯೋಗ ಲಭಿಸುತ್ತಿಲ್ಲ. ರೈತರಿಗೆ ಗೊಬ್ಬರುಗಳು ಲಭ್ಯವಾಗುತ್ತಿಲ್ಲ. ಆದರೆ ಸರ್ಕಾರ ಇದರ ವಿರುದ್ಧವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಒಪ್ಪುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಕ್ರಮವೂ ಕೈಗೊಳ್ಳುತ್ತಿಲ್ಲ” ಎಂದು ಸಿಂಘಾರ್ ಆರೋಪಿಸಿದ್ದಾರೆ.

ಆದರೆ ಇದಕ್ಕೆ ತಿರುಗೇಟು ನೀಡಿದ ಕ್ರೀಡಾ ಸಚಿವ ವಿಶ್ವಾಶ್ ಸಾರಂಗ್, “ನಾವು ಎಲ್ಲಾ ವಿಚಾರದ ಬಗ್ಗೆ ಚರ್ಚೆ ನಡೆಸಲು ಸಿದ್ಧವಿದ್ದೇವೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡಿ ಬಜೆಟ್ ಅಧಿವೇಶನದ ವೇಳೆ ಗದ್ದಲ ಸೃಷ್ಟಿಸುತ್ತಿದೆ. ಬರೀ ಫೋಟೋಗಾಗಿ ಈ ರೀತಿ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X