ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

Date:

Advertisements

ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ 1ರಿಂದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ಗೌರವಧನವನ್ನು ನೀಡಬೇಕು ಮತ್ತು ಬಜೆಟ್‌ನಲ್ಲಿ ಘೋಷಿಸಿರುವಂತೆ ₹1,000 ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಅಶಾ ಸಂಘಟನೆ ಜಿಲ್ಲಾ ಸಂಚಾಲಕ ಭರತ್ ಕುಮಾರ್ ಮಾತನಾಡಿ, “ಕಳೆದ ಜನವರಿಯಲ್ಲಿ ನಡೆದ ಹೋರಾಟದ ವೇಳೆ ಏಪ್ರಿಲ್‌ನಿಂದ ಪ್ರತಿ ತಿಂಗಳು ಎಲ್ಲ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ನೀಡಲಾಗುವುದು, ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಗೌರವಧನ ನೀಡಲಾಗುವುದು, ಒಂದು ವೇಳೆ ಕಾಂಪೋನೆಂಟ್‌ಗಳಿಂದ ಯಾರಿಗಾದರೂ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ ಅಂತಹ ಅಶಾ ಕಾರ್ಯಕರ್ತೆಯರಿಗೆ ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಲಾಗುವುದೆಂದು ಸ್ವತಃ ಮುಖ್ಯಮಂತ್ರಿಯವರೇ ಹೇಳಿದ್ದರು. ಆದರೆ, ಈಗ ಇದನ್ನು ಜಾರಿಗೊಳಿಸಲು ಸರ್ಕಾರ ಮೀನಾಮೇಷ ಎಣಿಸುವುದು ಸರಿಯಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮಾನಸಿಕ ಒತ್ತಡ ಮೀರಿ ಮಹಿಳೆ ಜವಾಬ್ದಾರಿ ನಿಭಾಯಿಸಬಲ್ಲಳು: ಶೋಭಾ

Advertisements

ಎಐಯುಟಿಯುಸಿ ಸಮಿತಿ ಜಿಲ್ಲಾ ಸದಸ್ಯೆ ಮಹಾದೇವಿ ಧರ್ಮಶೆಟ್ಟಿ, ಆಶಾ ಮುಖಂಡೆಯರಾದ ಭಾರತಿ ದೇವಕತೆ, ನಿರ್ಮಲಾ ಕಲಕೇರಿ, ಲೈಲಾ ಪಠಾಣ, ಲಕ್ಷ್ಮೀ ಸಿಮಿಕೇರಿ ರೇಣುಕಾ, ಅಂಬಿಕಾ ಒಳಸಂಗ, ಮೈರುನ್ನಿಸಾ, ಜ್ಯೋತಿ ಶಾಬಾದಿ, ಲಕ್ಷ್ಮೀ, ರೇಣುಕಾ ಸುವಣಾವಿಬೂತಿಮಠ, ಛಲವಾದಿ, ಜಯಶ್ರೀ ತ ಕಂಬಾರ, ಗೀತಾ, ಬಂಗಾರತಾಳ, ಕಾಶೀಬಾಯಿ, ಮಾಳಗುಂಡಮ್ಮ, ರೇಣುಕಾ, ಸುವರ್ಣಾ, ಮಂಜುಳಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X