ಬೀದರ್‌ | ನಾಳೆಯಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ : 91 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ : ಡಿಸಿ ಶಿಲ್ಪಾ ಶರ್ಮಾ

Date:

Advertisements

ʼರಾಜ್ಯದಾದ್ಯಂತ ಮಾರ್ಚ್‌ 21 ರಿಂದ ಏಪ್ರಿಲ್‌ 4ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯ 91 ಕೇಂದ್ರಗಳಲ್ಲಿ ಸುಗಮ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಮಾರ್ಚ್ 21ರಂದು ಪ್ರಥಮ ಭಾಷೆ, ಮಾರ್ಚ್‌ 24ರಂದು ಗಣಿತ, ಮಾರ್ಚ್‌ 26ರಂದು ದ್ವಿತೀಯ ಭಾಷೆ, ಮಾರ್ಚ್‌ 29ರಂದು ಸಮಾಜ ವಿಜ್ಞಾನ, ಏ.2ರಂದು ವಿಜ್ಞಾನ, ಏ.4ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿವೆ. ಪ್ರಥಮ ಬಾರಿಗೆ 25,409, ಪುನರಾವರ್ತಿತ 2,353 ಸೇರಿದಂತೆ ಒಟ್ಟು 28,602 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆʼ ಎಂದು ತಿಳಿಸಿದ್ದಾರೆ.

ʼ91 ಪರೀಕ್ಷಾ ಕೇಂದ್ರಗಳ ಒಟ್ಟು 1,264 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿವೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್‌ಕಾಸ್ಟಿಂಗ್‌ನಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕ ಮತ್ತು ಪ್ರಶ್ನೆ ಪತ್ರಿಕೆ ಅಭಿರಕ್ಷಕರ ನೇಮಕಾತಿ ಮಾಡಲಾಗಿದೆʼ ಎಂದರು.

Advertisements

ʼಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲು ಕಲಂ 144 ಜಾರಿ ಮಾಡಲಾಗಿದೆ. ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅನಧೀಕೃತ ವ್ಯಕ್ತಿಯನ್ನು ಪ್ರವೇಶಿಸಲು ನಿರ್ಬಂಧಿಸಲಾಗಿದೆ. ಮೊಬೈಲ್ ಫೋನ್ ಹಾಗೂ ಇನ್ನಿತರ ಡಿಜಿಟಲ್ ಉಪಕರಣಗಳನ್ನು ಬಳಸವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ತಾಲ್ಲೂಕಿಗೆ ಒಂದರಂತೆ ಸರದಿ ಪದ್ದತಿಯಲ್ಲಿ ಶಿಕ್ಷಣ ಇಲಾಖೆ ಹೊರತು ಪಡಿಸಿ ಅನ್ಯ ಇಲಾಖೆಯ ಅಧಿಕಾರಿಗಳನ್ನಾಗಿ ಜಾಗೃತದಳ ಅಧಿಕಾರಿಗಳಾಗಿ ನೇಮಿಸಿ 5 ತಂಡಗಳನ್ನು ರಚಿಸಲಾಗಿದೆʼ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನ್ನದಾತರ ಸಾವಿಗೆ ಕೊನೆಯಿಲ್ಲ : 5 ವರ್ಷಗಳಲ್ಲಿ 100 ದಾಟಿದ ರೈತರ ಆತ್ಮಹತ್ಯೆ ಸಂಖ್ಯೆ

ಬೇಸಿಗೆ ಅವಧಿಯಲ್ಲಿ ಸೆಕೆ ಹೆಚ್ಚಾಗಿರುವುದರಿಂದ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಆರ್‌ಎಸ್ ನೀಡಲು ಸೂಚಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದವರೆಗೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಯಾವುದೇ ಆತಂಕವಿಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X