ಈರಣ್ಣ ಕಡಾಡಿ ಹಾಗೂ ಕೇಂದ್ರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಪ್ರಲ್ಲಾದ್ ಜೋಶಿ ಅವರು ಗುರುವಾರ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಯೋಜನೆಗಳ ಕುರಿತು ನವದೆಹಲಿಯ ಸಚಿವರ ಕಚೇರಿಯಲ್ಲಿ ಚರ್ಚಿಸಿದ್ದು ಲೋಕಾಪೂರ,ರಾಮದುರ್ಗ ಸವದತ್ತಿ ರೈಲು ಮಾರ್ಗದ ಕುರಿತು ನಿರ್ಧಾರ ಪ್ರಕಟಿಸಲಾಗುವದು ಎಂದು ತಿಳಿಸಿದ್ದಾರೆ.
ಕಚೇರಿಯಲ್ಲಿ ಚರ್ಚೆ ನಡೆಸಿದ ಸಂಸದ ಶೆಟ್ಟರ್, ‘ಲೋಕಾಪೂರ- ರಾಮದುರ್ಗ-ಸವದತ್ತಿ- ಧಾರವಾಡ ನಡುವೆ ನೂತನ ರೈಲು ಮಾರ್ಗ ರಚನೆಯ ಅಂಗವಾಗಿ ಪ್ರಾರಂಭಿಕವಾಗಿ ‘ಮಾರ್ಗ ಸಮೀಕ್ಷೆ’ ನಡೆಸಬೇಕು. ಸವದತ್ತಿಯ ರೇಣುಕಾದೇವಿಯ ಲಕ್ಷಾಂತರ ಭಕ್ತಾದಿಗಳ ಅನುಕೂಲಕ್ಕಾಗಿ ಈ ಮಾರ್ಗ ರಚನೆ ತುಂಬಾ ಅವಶ್ಯಕತೆ ಇದೆ’ ಎಂದು ಕೇಂದ್ರ ಸಚಿವರಲ್ಲಿ ಮನವರಿಕೆ ಮಾಡಿದರು.
ಬೆಳಗಾವಿ ರಹವಾಸಿಗಳ ಅನಕೂಲಕ್ಕಾಗಿ ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ‘ವಂದೇ ಭಾರತ ರೈಲು’ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ಅನುಕೂಲ ಮಾಡಿ ಕೊಡಬೇಕು. ಅನೇಕ ದಿನಗಳಿಂದ ಈ ಬೇಡಿಕೆ ಕನಸಾಗಿಯೇ ಉಳಿದೆ. ಸಾಧ್ಯವಾದಷ್ಟು ಬೇಗ ನೆರವೇರಿಸಿ ಕೊಡಬೇಕು ಎಂದೂ ಸಂಸದ ಮನವಿ ಮಾಡಿದ್ದಾರೆ.
ಬೆಳಗಾವಿ- ಮಿರಜ್ ನಡುವೆ ದಿನನಿತ್ಯ ಸಂಚರಿಸುವ ಪ್ಯಾಸೆಂಜರ್ ರೈಲು ಸೇವೆಯನ್ನು ಪ್ರತಿ ತಿಂಗಳು ವಿಸ್ತರಿಸುತ್ತ ಬರಲಾಗಿದೆ. ಈ ಸೇವೆಯನ್ನು ಕಾಯಂ ಮಾಡುವ ನಿಟ್ಟಿನಲ್ಲಿ ಅಗತ್ಯ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.