ಕನ್ನಡ ಸಿನಿಮಾ ನಿರ್ದೇಶಕ ಎ ಟಿ ರಘು ನಿಧನ; ಅಂಬರೀಷ್‌ ಅವರ 27 ಚಿತ್ರಗಳಿಗೆ ಆ್ಯಕ್ಷನ್‌ ಕಟ್

Date:

Advertisements

ಹಿರಿಯ ಕನ್ನಡ ಚಿತ್ರ ನಿರ್ದೇಶಕ ಎ ಟಿ ರಘು ಅವರು ನಿಧನರಾಗಿದ್ದಾರೆ. ‘ಮಂಡ್ಯದ ಗಂಡು’ ಸೇರಿದಂತೆ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದರು. ಅವರ ನಿಧನದಿಂದ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ರಘು ಅವರಿಗೆ 76 ವರ್ಷ ವಯಸ್ಸಾಗಿತ್ತು. ಗುರುವಾರ (ಮಾರ್ಚ್​ 20) ರಾತ್ರಿ ಅವರು ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಿದ್ದ ಅವರು ನಿರಂತರವಾಗಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಸದ್ಯ ಬೆಂಗಳೂರಿನ ಆರ್​ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದೆ. ಇಂದು (ಮಾರ್ಚ್ 21) ಮದ್ಯಾಹ್ನ 2 ಗಂಟೆ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಎ ಟಿ ರಘು ಅವರು ಕೊಡಗಿನಲ್ಲಿ ಜನಿಸಿದ್ದರು. ಕೊಡವ ಸಮುದಾಯಕ್ಕೆ ಸೇರಿದ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಿರ್ಮಾಪಕರನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡರು. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕೊರತೆಗಳ ನಡುವೆಯೂ ಫಿಲ್ಮ್ ಫೆಸ್ಟಿವಲ್ ಯಶಸ್ವಿ

1980ರಲ್ಲಿ ಬಿಡುಗಡೆಯಾದ ಅಂಬರೀಷ್‌ ನಟನೆಯ ‘ನ್ಯಾಯ ನೀತಿ ಧರ್ಮ’ ಚಿತ್ರ ನಿರ್ದೇಶಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟಿದ್ದರು. ಈ ಸಿನಿಮಾ ಮೂಲಕ ಅಂಬರೀಷ್ ಜೊತೆ ರಘು ಅವರಿಗೆ ಒಳ್ಳೆಯ ಒಡನಾಟ ಬೆಳೆಯಿತು.

ಅಂಬರೀಷ್ ನಟನೆಯ ‘ಆಶ’, ‘ಅವಳ ನೆರಳು’, ‘ಮಂಡ್ಯದ ಗಂಡು’, ‘ಮಿಡಿದ ಹೃದಯಗಳು’ ಸೇರಿ 27 ಸಿನಿಮಾಗಳನ್ನು ರಘು ನಿರ್ದೇಶಿಸಿದ್ದರು.

ರಘು ಅವರು ಹಿಂದಿ, ಮಲಯಾಳಂ ಚಿತ್ರರಂಗದಲ್ಲೂ ಕೆಲಸ ಮಾಡಿದ್ದಾರೆ. ‘ಆಶಾ’ ಚಿತ್ರವನ್ನು ಅವರು ಹಿಂದಿಗೆ ‘ಮೆರಿ ಅದಾಲತ್’ ಹೆಸರಿನಲ್ಲಿ ರಿಮೇಕ್ ಮಾಡಿದರು. ಇದರಲ್ಲಿ ರಜನಿಕಾಂತ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ 1984ರಲ್ಲಿ ಬಿಡುಗಡೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X