ತುಮಕೂರು | ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ಯಲ್ಲಿ ಮಹತ್ತರ ಸಾಧನೆ: ಸಾಹೇ ವಿವಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ

Date:

Advertisements

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿ-ಕಲಿಸುವಲ್ಲಿ ಸಾಧನೆ ಮಾಡಿದ ಸಾಹೆ ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಕೊಡಮಾಡುವ 2025ನೇ ವರ್ಷದ ‘ಪ್ರೋಸ್ಪೆಕ್ಟ್ ರಾಷ್ಟ್ರೀಯ ಪ್ರಶಸ್ತಿ’ ಗೆ  ಮತ್ತೊಮ್ಮೆ ಪಾತ್ರವಾಗಿದೆ.  

ಪ್ರಶಸ್ತಿ ಪಡೆದ ದಕ್ಷಿಣ ಭಾರತದ ರಾಜ್ಯಗಳಲ್ಲಿ, ಅದರಲ್ಲೂ ಕರ್ನಾಟಕದ ಬೆರಳೆಣಿಕೆಯಷ್ಟು ಕಾಲೇಜುಗಳಲ್ಲಿ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಕೂಡ ಒಂದಾಗಿದೆ. ಈ ಸಾಲಿನ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ದಿ ಕಾರ್ಯಕ್ರಮ ದಡಿಯಲ್ಲಿ ಸುಮಾರು 1300 ವಿದ್ಯಾರ್ಥಿಗಳು ನೋಂದಾಯಿಸಿ ಆನ್ಲೈನ್ ಮೂಲಕ ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ.

ಸಾಹೇ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿ ಹೆಚ್ಚಿನ ವಿದ್ಯಾರ್ಥಿಗಳು ‘ರಾಷ್ಟ್ರೀಯ  ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಯೋಜನೆಯಲ್ಲಿ ಭಾಗವಹಿಸಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ಖರಗಪುರದ ಐಐಟಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಾಹೇ ನೋಡಲ್ ಅಧಿಕಾರಿ ಡಾ. ಪ್ರವೀಣ್ ಕುಮಾರ್. ಸಿ, ಅವರು ಭಾಗವಹಿಸಿ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಶಸ್ತಿಯನ್ನು ಸ್ವೀಕರಿಸಿದರು.

Advertisements
1001195137

ತಾಂತ್ರಿಕ ಮಾಹಿತಿ ಭಂಡಾರವನ್ನು ದೇಶದ ಎಲ್ಲಾ ತಾಂತ್ರಿಕ ವಿದ್ಯಾರ್ಥಿಗಳು ತಮ್ಮ ಆಲೋಚನೆ ಅಭಿವೃದ್ಧಿ ಗುಣಮಟ್ಟದ ವಿಷಯಗಳನ್ನು ಕಲಿಯುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಶ್ರೀ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಾಹೇ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಈ ಯೋಜನೆಯ ಸದಾವಕಾಶವನ್ನು ಬಳಸಿಕೊಳ್ಳುತ್ತಿದ್ದಾರೆ. ತಾಂತ್ರಿಕ ಮಾಹಿತಿ ಭಂಡಾರವನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಳಸಿಕೊಳ್ಳಲು ವೇದಿಕೆಯನ್ನು ಸಿದ್ಧಪಡಿಸಲಾಗಿದೆ.

ಈ ಕಾರ್ಯಕ್ರಮದ ಯೋಜನೆಯಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಎನ್‌ಪಿಟಿಇಎಲ್ ಕಾರ್ಯಕ್ರಮದಲ್ಲಿ ನೋಂದಾಯಿಸಲು ಹೆಚ್ಚಿನ ಆಸಕ್ತಿ ತೆಗೆದುಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ತಾಂತ್ರಿಕ ಉನ್ನತಿಗೆ ಹಾಗೂ ಉನ್ನತ ಸಂಸ್ಥೆಗಳಲ್ಲಿನ ನೌಕರಿಗೆ ಸಹಾಯಕವಾಗಲಿದೆ ಎಂದು ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ ಅವರು ಅಭಿಪ್ರಾಯಪಟ್ಟಿದ್ದಾರೆ.

ಯೋಜನೆಯ ಸಂಯೋಜಕ ಡಾ.ಪ್ರವೀಣ್ ಅವರು, ಖರಗಪುರದ ಪಡೆದ ಪ್ರಶಸ್ತಿಯನ್ನು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ ಅವರ ಸಮ್ಮುಖದಲ್ಲಿ ಸಾಹೇ ವಿವಿಗೆ ಹಸ್ತಾಂತ್ತರಿಸಿದರು.

 ಸಾಹೇ ವಿವಿಯ ಯೋಜನೆಯ ಸಂಯೋಜಕ ಡಾ.ಪ್ರವೀಣ್,ಕಾಲೇಜಿನ ಸಂಯೋಜಕಿ ಡಾ.ರೂಪ ಎನ್. ಕೆ ಸೇರಿದಂತೆ ತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎನ್‌ಪಿಟಿಇಲ್ ಯೋಜನೆ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂಧ ಧನಸಹಾಯ ಪಡೆದ ಐಐಟಿ ಮತ್ತು ಐಐಎಸ್‌ಸಿ ಸಂಸ್ಥೆಗಳ ಜಂಟಿಯಾಗಿ ದೇಶದ ಮೂಲೆ ಮೂಲೆಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಂಡೊಯ್ಯುವ ಯೋಜನೆಯಾಗಿದೆ. ಪ್ರತಿ ಸೆಮಿಸ್ಟರ್‌ನಲ್ಲಿ ಸುಮಾರು 22 ವಿಭಾಗಗಳಲ್ಲಿ ಸುಮಾರು 600ಕ್ಕೂ ಕೋರ್ಸ್ಗಳನ್ನು ಆನ್ ಲೈನ್ ಮೂಲಕ ನೀಡಲಾಗುತ್ತಿದೆ. ಎಂಜಿನಿಯರಿಂಗ್, ಮೂಲ ವಿಜ್ಞಾನಗಳು ಮತ್ತು ಆಯ್ದ ಮಾನವಿಕ ಮತ್ತು ನಿರ್ವಹಣಾ ವಿಷಯಗಳ ಕೋರ್ಸ್ಗಳ ವಿಶ್ವದ ಅತಿದೊಡ್ಡ ಆನ್‌ಲೈನ್ ಭಂಡಾರವೇ ಇಲ್ಲಿ ದೊರಯಲಿದೆ.

ಪ್ರಾದೇಶಿಕ ಭಾರತೀಯ ಭಾಷೆಗಳಲ್ಲಿ 12000 ಗಂಟೆಗಳಿಗಿಂತ ಹೆಚ್ಚು ಇಂಗ್ಲಿಷ್ ಪ್ರತಿಲಿಪಿಗಳ ಅನುವಾದ ಅತ್ಯಂತ ಹಿಂದುಳಿದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಬೋಧನಾ ಕಲಿಕಾ ಸಂಪನ್ಮೂಲಗಳನ್ನು ನೀಡುವುದು ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಕಲಿಸುವುದು ಈ ಯೋಜನೆಯ ಉದ್ದೇಶವಾಗಿದೆ. 9 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗಿನ ವಿದ್ಯಾಥಿಗಳಿಗೆ ಸಂವಾದಾತ್ಮಕವಾಗಿ ಮತ್ತು ಉಚಿತವಾಗಿ ಈ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಾಹೇ ವಿವಿಯಲ್ಲಿರುವ ಯೋಜನೆಯ ಸಂಯೋಜಕ ಡಾ.ಪ್ರವೀಣ್ ತಿಳಿಸಿದ್ದಾರೆ.

ಐಐಟಿಗಳಿಂದ ಕಲಿಯಲು ಆಸಕ್ತಿ ಹೊಂದಿರುವ ಯಾರಿಗಾದರೂ ಗುಣಮಟ್ಟದ ಶಿಕ್ಷಣವನ್ನು ಒದಗಿಸಿ. ಪದವಿಪೂರ್ವ ಮತ್ತು ಸ್ನಾತಕೋತ್ತರ ಹಂತಗಳಲ್ಲಿ ಮೂಲ ವಿಜ್ಞಾನ ಮತ್ತು ಆಯ್ದ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವೆಬ್ ಮತ್ತು ವೀಡಿಯೊ ಕೋರ್ಸ್ಗಳನ್ನು ಸಿದ್ದಪಡಿಸಿ, ಕಲಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಅಂತಹ ಶಿಕ್ಷಣದ ಯೋಜನೆಯನ್ನು ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ.

ಡಾ. ಜಿ.ಪರಮೇಶ್ವರ ಶ್ಲಾಘನೆ:

ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗೆ ವೇಗವರ್ಧಕವಾಗಿ ತಾಂತ್ರಿಕ ಶಿಕ್ಷಣದ ಪಾತ್ರವು ಅನಿವಾರ್ಯವಾಗಿದೆ. ಶಿಕ್ಷಣದಲ್ಲಿ ಉತ್ಕೃಷ್ಟತೆ ಮತ್ತು ನಾವೀನ್ಯತೆಯನ್ನು ಬೆಳೆಸಲು ಮತ್ತು ಪ್ರಗತಿಯತ್ತ ದಾಪುಗಾಲು ಹಾಕುವ ನಿಟ್ಟಿನಲ್ಲಿ ಸಾಹೇ ವಿಶ್ವವಿದ್ಯಾಲಯವೂ ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದು ಸಾಹೇವಿವಿ ಕುಲಾಧಿಪತಿಗಳಾದ ಡಾ. ಜಿ.ಪರಮೇಶ್ವರ ಅವರು, ಪ್ರಶಸ್ತಿಗೆ ಭಾಜನರಾದ ಕಾಲೇಜು ಮತ್ತು ಪ್ರಾಧ್ಯಾಪಕ ತಂಡದ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

images 35

ಬದಲಾಗುತ್ತಿರುವ ಜಗತ್ತಿಗೆ ಹೊಸತನದ ಶಿಕ್ಷಣದ ಕಲಿಕೆ ಅಗತ್ಯ. ಕೋರ್ಸ್ಗಳು ವಿಶೇಷವಾಗಿ ಎಂಜಿನಿಯರಿಂಗ್ ಮತ್ತು ವಿಜ್ಞಾನದಲ್ಲಿ ಉತ್ತಮ ಗುಣಮಟ್ಟದ, ಉಚಿತ ಆನ್‌ಲೈನ್ ಶಿಕ್ಷಣವನ್ನು ಒದಗಿಸಲು ಮುಖ್ಯವಾಗಿವೆ. ವಿಶೇಷ ಕೌಶಲ್ಯಗಳನ್ನು ಪಡೆಯಲು ಮತ್ತು ವೃತ್ತಿ ನಿರೀಕ್ಷೆಗಳನ್ನು ಹೆಚ್ಚಿಸಲು ಅನನ್ಯ ಅವಕಾಶವನ್ನು ನೀಡುತ್ತವೆ. ಹಾಗಾಗಿ ಇಂತಹ ಕೋರ್ಸ್ ಗಳ ಕಲಿಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಡಾ. ಜಿ.ಪರಮೇಶ್ವರ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X